ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

Published : Dec 08, 2018, 12:43 PM ISTUpdated : Dec 08, 2018, 01:28 PM IST

ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚೆನ್ನೈ[ಡಿ.08]: ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಿದ್ದಗಂಗಾ ಶ್ರೀಗಳಿಗೆ ಬೈಪಾಸ್ ಸರ್ಜರಿ ಅಗತ್ಯವಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ಬಳಿಕ ನಗುಮೊಗದಿಂದ ಹೊರಬಂದ ಡಾ. ಮೊಹಮ್ಮದ್ ರೇಲಾಆಪರೇಷನ್ ಸಕ್ಸಸ್ ಎಂದಾಕ್ಷಣ ಭಕ್ತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಶ್ರೀಗಳನ್ನು ಸದ್ಯ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರ ಬಂದ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!