ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಿಢೀರ್‌ ಮಳೆ: ಬರದಿಂದ ಕಂಗೆಟ್ಟ ರೈತ ಕೊಂಚ ನಿರಾಳ

Published : Nov 07, 2023, 08:00 AM IST
ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಿಢೀರ್‌ ಮಳೆ: ಬರದಿಂದ ಕಂಗೆಟ್ಟ ರೈತ ಕೊಂಚ ನಿರಾಳ

ಸಾರಾಂಶ

ಬೆಂಗಳೂರು, ಧಾರವಾಡ, ಕಲಬುರಗಿ, ಬಾಗಲಕೋಟೆ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತಿತರ ಕಡೆ ಕೆಲಕಾಲ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಚ್.ಕುನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.

ಬೆಂಗಳೂರು(ನ.07):  ಹಲವು ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮಳೆ ಅಬ್ಬರಿಸಿದೆ. ಧಾರವಾಡ, ಬೆಂಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಕೆಲಕಾಲ ಉತ್ತಮ ಮಳೆ ಸುರಿದಿದೆ. ಈ ಮೂಲಕ ಬರದ ಬೇಗೆಯಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ತುಸು ಮಂದಹಾಸ ಮೂಡಿಸಿದೆ.

ಬೆಂಗಳೂರು, ಧಾರವಾಡ, ಕಲಬುರಗಿ, ಬಾಗಲಕೋಟೆ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತಿತರ ಕಡೆ ಕೆಲಕಾಲ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಚ್.ಕುನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.

ಬೆಂಗಳೂರಲ್ಲಿ ಭಾರೀ ಮಳೆ; ಈ ಪ್ರದೇಶಗಳ ವಾಹನ ಚಾಲಕರಿಗೆ ಪೊಲೀಸರಿಂದ ಮಹತ್ವದ ಸಂಚಾರ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಗ್ರಾಮೀಣ ಭಾಗದಲ್ಲಿ ಸತತ 2 ದಿನಗಳಿಂದ ಮಳೆಯಾಗುತ್ತಿರುವುದು ರೈತರಲ್ಲಿ ಹರ್ಷ ಮೂಡಿಸಿದರೆ. ಆದರೆ, ನಗರದಲ್ಲಿ ಸತತ 4 ಗಂಟೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಅಡಕೆ ತೋಟಗಳನ್ನು ರಕ್ಷಿಸಿಕೊಳ್ಳಲು ನಿರ್ಮಿಸಿಕೊಂಡಿದ್ದ ಕೃಷಿ ಹೊಂಡಗಳು ತುಂಬಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ.

ಇನ್ನು ದಾವಣಗೆರೆಯ ಹರಿಹರ, ಹೊನ್ನಾಳಿ ಸುತ್ತಮುತ್ತ, ಬಾಗಲಕೋಟೆ ಜಿಲ್ಲೆಯಾದ್ಯಂತ ಭಾಗಶಃ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ. ಕಲಬುರಗಿ ಜಿಲ್ಲೆಯಲ್ಲೂ ದಿಢೀರ್‌ ಮಳೆಗೆ ನಾಲವಾರ ಸೇರಿ ವಿವಿಧೆಡೆ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ಇನ್ನು ತುಮಕೂರು, ಬೆಂಗಳೂರಿನಲ್ಲಿ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ತತ್ತರಿಸುವಂತಾಯಿತು. ಕರಾವಳಿಯಲ್ಲಿ ಕಳೆದ ಮೂರುದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ