ಮಲೇಷ್ಯಾದಿಂದಲೇ ಹುತಾತ್ಮ ಗುರು ಕುಟುಂಬಕ್ಕೆ ಜಮೀನು ನೆರವು ಘೋಷಿಸಿದ ಸುಮಲತಾ ಅಂಬರೀಶ್

Published : Feb 16, 2019, 04:19 PM ISTUpdated : Feb 16, 2019, 04:25 PM IST
ಮಲೇಷ್ಯಾದಿಂದಲೇ ಹುತಾತ್ಮ ಗುರು ಕುಟುಂಬಕ್ಕೆ ಜಮೀನು ನೆರವು ಘೋಷಿಸಿದ ಸುಮಲತಾ ಅಂಬರೀಶ್

ಸಾರಾಂಶ

ಹುತಾತ್ಮ ಯೋಧನ ಕುಟುಂಬಕ್ಕೆ ನೆರವು ಘೋಷಿಸಿದ  ದಿ.ಅಂಬರೀಶ್​ ಪತ್ನಿ ಸುಮಲತಾ ಅಂಬರೀಶ್! ಜಮೀನು ನೀಡುವುದಾಗಿ ಸುಮಲತಾ ಅಂಬರೀಶ್ ಘೋಷಣೆ​! ಮಲೇಷಿಯಾದಿಂದಲೇ ಘೋಷಿಸಿದ ಸುಮಲತಾ ಅಂಬರೀಶ್​.

ಬೆಂಗಳೂರು, (16): ಮಂಡ್ಯ ಸಿಡಿಲಮರಿ, ಹುತಾತ್ಮ ಯೋಧ ಎಚ್. ಗುರು ಅವರ ಕುಟುಂಬಕ್ಕೆ ಸುಮಲತಾ ಅಂಬರೀಶ್ ನೆರವು ಘೋಷಿಸಿದ್ದಾರೆ.

ಶೂಟಿಂಗ್ ನಿಮಿತ್ತ ಮಲೇಷ್ಯಾ ಪ್ರವಾಸದಲ್ಲಿರುವ ಸುಮಲತಾ ಅಂಬರೀಶ್ ಅವರು ಹುತಾತ್ಮ ಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಗುರು ಕುಟುಂಬಕ್ಕೆ ಅರ್ಧ ಎಕರೆ ಜಮೀನು ನೀಡುವುದಾಗಿ ಘೋಷಿಸಿದ್ದಾರೆ.

ಅಂಬರೀಶ್​ ಹುಟ್ಟೂರು ದೊಡ್ಡರಸಿನಕೆರೆಯಲ್ಲಿರುವ ಅರ್ಧ ಎಕರೆ ಜಮೀನು ನೀಡುವುದಾಗಿ  ಮಲೇಷ್ಯಾದಿಂದಲೇ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮಂಡ್ಯದ ಗಂಡು ವೀರಯೋಧ ಗುರು ಕುಟುಂಬಕ್ಕೆ 25 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ಹುದ್ದೆ

ಹುತಾತ್ಮ ಯೋಧ ಗುರು ಕುಟುಂಬಕ್ಕೆ ನನ್ನದೊಂದು ಪುಟ್ಟ ಸೇವೆ ಅಷ್ಟೇ. ನಾನು ಮಲೇಷಿಯಾದಲ್ಲಿ ಶೂಟಿಂಗ್​ನಲ್ಲಿ ಇದ್ದೇನೆ. ಮಲೇಷಿಯಾದಿಂದ ಬಂದ ಬಳಿಕ ಗುರು ಮನೆಗೆ ಭೇಟಿ ನೀಡುವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ನಿಜಕ್ಕೂ ಸುಮಲತಾ ಅಂಬರೀಶ್ ಅವರ ಈ ಕಾರ್ಯಕ್ಕೆ ದೊಡ್ಡ ಸೆಲ್ಯೂಟ್.

"

ಇನ್ನು ರಾಜ್ಯ ಸರ್ಕಾರ 25 ಲಕ್ಷ ರೂ. ನೀಡುವುದಾಗಿ ಹೇಳಿದೆ. ಇದರ ಜೊತೆಗೆ ಗುರು ಅವರ ಹೆಂಡತಿಗೆ ಸರ್ಕಾರಿ ನೌಕರಿ ನೀಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರ ಸ್ಫೋಟಕ ತುಂಬಿದ ಕಾರನ್ನು ಯೋಧರು ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿ ಭೀಕರ ಸ್ಫೋಟ ಸಂಭವಿಸಿತ್ತು. ಇದರಿಂದ 44  ಯೊಧರು ಹುತಾತ್ಮರಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌