
ಬೆಳಗಾವಿ: ಬಿಸಿಲದಾಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಬರುವ ಬೇಸಿಗೆ ರಜೆ ಮಕ್ಕಳ ಪಾಲಿಗೆ ಸಜೆಯಾಗಿದೆ. ಹೌದು ಸೆಖೆ ತಾಳಲಾರದೇ ಹಾಗೂ ಬೇಸಿಗೆ ರಜೆಯಲ್ಲಿ ನೀರಿನಲ್ಲಿ ಮಜಾ ಮಾಡುವ ಉದ್ದೇಶದಿಂದ ಶಾಲಾ ಮಕ್ಕಳು ತಂಡ ತಂಡವಾಗಿ ಹಳ್ಳಿಗಳಲ್ಲಿ ಸಮೀಪದ ಕೆರೆ ಹೊಳೆ, ತೊರೆಗಳಿಗೆ ಈಜಾಟಕ್ಕೆ ಹೋಗುತ್ತಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದು, ಪೋಷಕರಿಗೆ ಮಕ್ಕಳನ್ನು ತಡೆಯುವುದೇ ಈಗ ದೊಡ್ಡ ಸಾಹಸವಾಗುತ್ತಿದೆ. ಇದು ಏಪ್ರಿಲ್ ತಿಂಗಳ ಆರಂಭವಷ್ಟೇ ಆಗಲೇ ರಾಜ್ಯದಲ್ಲಿ ಇದುವರೆಗೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದ ಮಕ್ಕಳ ಸಂಖ್ಯೆ ಎರಡಂಕಿ ದಾಟಿವೆ.
ಅದೇ ರೀತಿ ಈಗ ನೀರಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ ಮತ್ತೊಂದು ಪ್ರಕರಣ ನಡೆದಿದೆ. ಗೆಳೆಯರೊಂದಿಗೆ ಕೃಷ್ಣಾ ನದಿಗೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 14 ವರ್ಷದ ನೌಮನ್ ಡೌವ್ ಮೃತಪಟ್ಟ ಬಾಲಕ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಈ ಘಟನೆ ನಡೆದಿದೆ. ಕುಡಚಿ ಪಟ್ಟಣದ ಪಕ್ಕದಲ್ಲಿಯೇ ಕೃಷ್ಣಾ ನದಿ ಹರಿಯುತ್ತಿದ್ದು, ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಬಾಲಕ ಕಣ್ಮರೆಯಾಗಿದ್ದಾನೆ.
ಬಾಲಕನಿಗಾಗಿ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸಿದ ಬಳಿಕ ಮೃತ ಬಾಲಕನ ಶವ ಸಿಕ್ಕಿದೆ. ಡಚಿ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಬೇಸಿಗೆ ರಜೆ ಪೋಷಕರ ಪಾಲಿಗೆ ಸಜೆಯಾಗಿ ಬದಲಾಗಿದ್ದು, ಮಕ್ಕಳನ್ನು ಕಾಯುವುದೇ ದೊಡ್ಡ ಕೆಲಸವಾಗಿದೆ.
ಇದನ್ನೂ ಓದಿ: ಸಚಿವ ಈಶ್ವರ್ ಖಂಡ್ರೆ ಮುಂದೆಯೇ ಕೇರಳದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ