
ಬೆಂಗಳೂರು (ಅ.15): ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಸತತ ಮೂರನೇ ದಿನವೂ ವಿದ್ಯುತ್ ಕಡಿತವಾಗಲಿದೆ. ಈ ಪ್ರದೇಶಗಳಲ್ಲಿ ಇಂದು (ಭಾನುವಾರ) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂನ ನಿರ್ವಹಣಾ ಕಾರ್ಯಗಳಿಂದಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಕಡಿತಗೊಳಿಸುವ ಬಗ್ಗೆ ಬೆಸ್ಕಾಂ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರದೇಶಗಳಲ್ಲಿ ನೀವು ವಾಸವಾಗಿದ್ದರೆ, ವಿದ್ಯುತ್ಗಾಗಿ ಕಾಯುತ್ತಾ ಕುಳಿತುಕೊಳ್ಳದೇ ತಮ್ಮ ಮುಂದಿನ ಕಾರ್ಯವೈಖರಿಗಳನ್ನು ಮಾಡಿಕೊಳ್ಳುವುದು ಸೂಕ್ತ. ಇನ್ನು ಕಳೆದ ಎರಡು ದಿನಗಳಿಂದಲೂ ವಿವಿಧ ಪ್ರದೇಶಗಳಲಲಿ ವಿದ್ಯುತ್ ಕಡಿತ ಮಾಡುತ್ತಿದ್ದು, ಸಾರ್ವಜನಿಕರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ: ಮಂತ್ರವಾದಿ ಕೊಟ್ಟ ನಾಟಿ ಔಷಧಿ ಸೇವಿಸಿ ಬಾಲಕ ಸಾವು
ಬೆಂಗಳೂರಿ, ಪ್ರೇಮ್ ನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ಪಿ&ಟಿ ಲೇಔಟ್, ಸುಬ್ರಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ, ಜ್ಯೋತಿನಗರ, ಶಂಕರಾನಂದ ಬಡವಾಣೆ, ಸಚಿನ್ ಲೇಔಟ್, ಗಂಗಮ್ಮ ಲೇಔಟ್, ಕಲ್ಲುಕೋಟೆ, ಪದವಿ ಕಾಲೇಜು ಪರಿಸರ, ಪ್ರೆಸಿಡೆನ್ಸಿ ಕಾಲೇಜು, ನಾಗಾಜಿ ಗುಡ್ಲು, ಡೈರಿ ವೃತ್ತ, ಫುಡ್ ಗೋಡೌನ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನಬೋರನಹಳ್ಳಿ, ಅಜ್ಜನಹಳ್ಳಿ, ಎಚ್. ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬ್ಯಾನಪಾಳ್ಯ, ಬಸರಿಹಳ್ಳಿ, ಹುಂಜನಾಳ್, ಬ್ಯಾಡರಹಳ್ಳಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಕಟಣೆಯಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ