
ನವದೆಹಲಿ/ಬಳ್ಳಾರಿ (ಅ.01): ಅಕ್ರಮ ಗಣಿಗಾರಿಕೆ ಪ್ರಕರಣದಿಂದಾಗಿ ಬಳ್ಳಾರಿಯಿಂದ ದೂರವಿದ್ದು 13 ವರ್ಷ ಕಾಲ 'ವನವಾಸ' ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಬಳ್ಳಾರಿಯಲ್ಲಿ ನೆಲೆಸಲು ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿದೆ.
ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಅನುಮತಿ ಸಿಗುತ್ತಿದ್ದಂತೆ ಅವರ ಬೆಂಬಲಿಗರು ಬಳ್ಳಾರಿಯಲ್ಲಿ ಪಟಾಕಿ ಸಿಡಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದ್ದಾರೆ. ಅ.3ರಂದು ಅಂದರೆ ನವರಾತ್ರಿಯಂದೇ ರೆಡ್ಡಿ ಬಳ್ಳಾರಿಗೆ ಕಾಲಿಡುವ ನಿರೀಕ್ಷೆ ಇದೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಓಬಳಾಪುರಂ ಗಣಿಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಆರೋಪದಡಿ 11ರ ಸೆಪ್ಟೆಂಬರ್ 5ರಂದು ಆಂಧ್ರಪ್ರದೇಶದ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಅವರನ್ನು ಬಂಧಿಸಿ, ಹೈದರಾಬಾದ್ನ ಚಂಚಲಗುಡ ಜೈಲಿಗೆ ಕಳುಹಿಸಿದ್ದರು. ಕರ್ನಾಟಕದಲ್ಲೂ ಅಕ್ರಮ ಗಣಿಗಾರಿಕೆ ಹಾಗೂ ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿ ಅವರು ಕೆಲಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಜೈಲುಶಿಕ್ಷೆ ಅನುಭವಿಸಿದ್ದರು.
ಕಾಲಚಕ್ರದಲ್ಲಿ ಕರ್ಮ ಸಿಎಂ ಸಿದ್ದರಾಮಯ್ಯ ಹಿಂಬಾಲಿಸಿದೆ: ಜನಾರ್ದನ ರೆಡ್ಡಿ
ಒಟ್ಟು 4.9 ವರ್ಷ ಜೈಲು ವಾಸ ಅನುಭವಿಸಿ 2015ರಲ್ಲಿ ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಸಾಕ್ಷ್ಯ ನಾಶದ ಸಾಧ್ಯತೆ ಹಿನ್ನೆಲೆಯಲ್ಲಿ ಬಳ್ಳಾರಿ, ಆಂಧ್ರಪ್ರದೇಶದ ಕಡಪ ಹಾಗೂ ಅನಂತಪುರ ಜಿಲ್ಲೆಗಳಿಗೆ ಪ್ರವೇಶ ನಿರ್ಬಂಧಿಸಿ ಹೈದರಾಬಾದ್ನ ಸಿಬಿಐ ನ್ಯಾಯಾಲಯ ಜಾಮೀನು ನೀಡಿತ್ತು .ಇದನ್ನು ಪ್ರಶ್ನಿಸಿ ರೆಡ್ಡಿ ಸುಪ್ರೀಂಕೋರ್ಟ್ ಮೊರೆಹೋಗಿದ್ದರಾದರೂಸರ್ವೋಚ್ಚನ್ಯಾಯಾಲಯ ಕೂಡ ಸಿಬಿಐ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿತ್ತು. ಆದರೆ ಪುತ್ರಿ ಮದುವೆ, ಮೊಮ್ಮಗಳ ನಾಮಕರಣ ಮತ್ತಿತರ ಸಂದರ್ಭಗಳಲ್ಲಿ ಕೋರ್ಟ್ ಪೂರ್ವಾನುಮತಿ ಪಡೆದು ಜನಾರ್ದನರೆಡ್ಡಿ ಐದು ಬಾರಿ ಬಳ್ಳಾರಿಗೆ ಕೆಲ ದಿನಗಳ ಕಾಲ ಬಂದು ಹೋಗಿದ್ದರು.
ಈ ವೇಳೆ ಬಳ್ಳಾರಿಯಿಂದ ದೂರವುಳಿಯಬೇಕಾದ ಪರಿಸ್ಥಿತಿ ಕುರಿತು ಅವರು ಅನೇಕ ಬಾರಿ ನೋವು ತೋಡಿಕೊಂಡಿದ್ದರು. ಇದೀಗ ಬಳ್ಳಾರಿಯಲ್ಲೇ ಉಳಿಯಲು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಎಂ.ಎಂ.ಸುಂದರೇಶ್, ನ್ಯಾ. ಅರವಿಂದ ಕುಮಾರ್ ಅವರಿದ್ದ ಪೀಠ ಅಸ್ತು ಎಂದಿರುವುದು ರೆಡ್ಡಿ ಮಾತ್ರವಲ್ಲದೆ, ಅವರ ಆಪ್ತ ಬಳಗ ಸೇರಿ ಬಿಜೆಪಿ ಪಾಳಯದಲ್ಲೂ ಸಂತಸ ಮೂಡಿಸಿದೆ.
ರಾಜಕೀಯ ಸಮೀಕರಣ ಬದಲು:
ರೆಡ್ಡಿ ಆಗಮನ ಬಳ್ಳಾರಿ ಜಿಲ್ಲೆಯಲ್ಲಿ ಹೊಸ ರಾಜಕೀಯ ಸಮೀಕರಣಕ್ಕೆ ಅವಕಾಶ ಮಾಡಿಕೊಡುವ ನಿರೀಕ್ಷೆ ಇದ್ದು, ಅವರ ಅಪ್ತ ಬಳಗದ ಹುಮ್ಮಸ್ಸು ಹೆಚ್ಚಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದೇ ಜನಾರ್ದನ ರೆಡ್ಡಿ. ರೆಡ್ಡಿ ಬಳ್ಳಾರಿಯಲ್ಲಿರುವವರೆಗೂ ಎಲ್ಲ ಚುನಾವಣೆಯಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. 2009 ಹೊಂದಿದ್ದರು. ಹೀಗಾಗಿ ಶ್ರೀರಾಮುಲು, ಜನಾರ್ದನ ರೆಡ್ಡಿ ಹಾಗೂ ಕರುಣಾಕರ ರೆಡ್ಡಿ ಸಚಿವರಾದರು. ಸರ್ಕಾರದಲ್ಲಿ ರೆಡ್ಡಿ ಸೋಮಶೇಖರ ರೆಡ್ಡಿ ಕೆಎಂಎಫ್ ಅಧ್ಯಕ್ಷರಾದರು.
ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜನಾರ್ದನ ರೆಡ್ಡಿ ಜೈಲು ಪಾಲಾದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ನಿಧಾನವಾಗಿನೆಲೆ ಕಳೆದುಕೊಳ್ಳುತ್ತಾ ಸಾಗಿತು. ಜಿಲ್ಲೆಯ ರಾಜಕೀಯ ವರ್ಚಸ್ತ ಕುಂದಿತು. ಇದೀಗ ರೆಡ್ಡಿ ಅವರಿಗೆ ಬಳ್ಳಾರಿ ಮಾತ್ರವಲ್ಲದೆ ಅಂಧ್ರದ ಕಡದ, ಅನಂತಪುರ ಜಿಲ್ಲೆಗಳಿಗೂ ಪ್ರವೇಶಿಸಲು ನ್ಯಾಯಾಲಯ ಅನುಮತಿ ನೀಡಿದೆ.
ವಾಲ್ಮೀಕಿ ನಿಗಮ ಹಗರಣ: ಪ್ರಕರಣದಲ್ಲಿ ನಾಗೇಂದ್ರನ ಬಲಿಪಶು ಮಾಡಲಾಗಿದೆ: ಜನಾರ್ದನ ರೆಡ್ಡಿ ವಾಗ್ದಾಳಿ
ಬಳ್ಳಾರಿಯಲ್ಲಿ ಸಂಭ್ರಮಾಚರಣೆ:
ಜನಾರ್ದನ ರೆಡ್ಡಿ ಆವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡುತ್ತಿದ್ದಂತೆ ನಗರದ ಎಸ್ಪಿ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೆಡ್ಡಿ ಅಭಿಮಾನಿಗಳು ಸಂಭ್ರಮಾಚರಿಸಿದರು. ಬಳಿಕ ಶ್ರೀಕನಕ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬಾಸ್ ಈಸ್ ಬ್ಯಾಕ್, ವೆಲ್ಕಮ್ ಟು ಬಳ್ಳಾರಿ ಜಿಜೆಆರ್ ಎಂಬ ಬ್ಯಾನರ್ ಹಿಡಿದು, ಕುಣಿದು ಕುಪ್ಪಳಿಸಿದರು. ಅ.3ರಂದು ಬಳ್ಳಾರಿಗೆ ಜನಾರ್ದನ ರೆಡ್ಡಿ ಆಗಮಿಸಲಿದ್ದು, ಸುಮಾರು 20 ಸಾವಿರ ಜನರನ್ನು ಆದ್ದೂರಿಯಾಗಿ ಬಳ್ಳಾರಿಗೆ ಸ್ವಾಗತ. ಮಾಡಿಕೊಳ್ಳಲು ಸಜ್ಜಾಗಿದ್ದೇವೆ ಎಂದು ಬಿಜೆಪಿ ಮುಖಂಡ ಕೆ.ಎಸ್. ದಿವಾಕರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ