
ನವದೆಹಲಿ (ಮಾ.3): ರಾಜ್ಯದಲ್ಲಿ ಧರ್ಮದಂಗಲ್ಗೆ ಮೂಲ ಕಾರಣವಾಗಿದ್ದ ಹಿಜಾಬ್ ವಿಚಾರವನ್ನು ವಿಚಾರಣೆ ಮಾಡಲು ಒಪ್ಪಿಕೊಂಡಿದ್ದ ಸುಪ್ರೀಂ ಕೋರ್ಟ್, ಈಗ ದಿನಾಂಕ ನಿಗದಿ ಮಾಡಿದೆ. ಹೋಳಿ ಹಬ್ಬದ ನಂತರ ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಕೇಸ್ನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮಾರ್ಚ್ 9 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ತುರ್ತಾಗಿ ವಿಚಾರಣೆ ನಡೆಸುವಂತೆ ವಕೀಲರು ಪ್ರಸ್ತಾಪ ಮಾಡಿದ್ದರು. ಅದರೆ, ಇದಕ್ಕೆ ನೀವು ತಡವಾಗಿ ಅರ್ಜಿ ಸಲ್ಲಿಕೆ ಮಾಡಿದ್ದೀರಿ ಎಂದು ಸಿಜೆಐ ಉತ್ತರ ನೀಡಿದ್ದರು. ಎರಡು ಬಾರಿ ಪೀಠದ ಮುಂದೆ ಪ್ರಸ್ತಾಪ ಮಾಡಿರುವುದಾಗಿ ವಕೀಲರು ಹೇಳಿಕೆ ನೀಡಿದ್ದರೂ, ಮಾಚ್೯ 17ರ ನಂತರದ ದಿನಗಳಲ್ಲಿ ಮುಂದಿನ ವಿಚಾರಣೆ ನಡೆಸಲಿದ್ದೇವೆ ಎಂದು ಸಿಜೆಐ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ