ಸೂರಜ್ ರೇವಣ್ಣ ಸಲಿಂಗ ಕಾಮದ ಕುರಿತು ಅಧಿಕೃತ ದೂರು ದಾಖಲಾಗಿಲ್ಲ: ಗೃಹ ಸಚಿವ ಪರಮೇಶ್ವರ

Published : Jun 22, 2024, 05:39 PM IST
ಸೂರಜ್ ರೇವಣ್ಣ ಸಲಿಂಗ ಕಾಮದ ಕುರಿತು ಅಧಿಕೃತ ದೂರು ದಾಖಲಾಗಿಲ್ಲ: ಗೃಹ ಸಚಿವ ಪರಮೇಶ್ವರ

ಸಾರಾಂಶ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ರೀತಿಯ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ  ಸ್ಪಷ್ಟಪಡಿಸಿದರು.

ಬೆಂಗಳೂರು (ಜೂನ್ 22): ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ರೀತಿಯ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ  ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ. ಆದರೆ, ಪತ್ರ ಬರೆಯುವುದಕ್ಕು, ದೂರು ಕೊಡುವುದಕ್ಕು ಸಾಕಷ್ಟು ವ್ಯತ್ಯಾಸವಿದೆ. ನೈಜತೆಯನ್ನು ಪರಿಶೀಲಿಸಬೇಕಾಗುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬಹುದು. ಆದರೆ, ಖಾಸಗಿ ಟಿವಿಯವರನ್ನು ಕರೆಸಿ, ಎಲ್ಲಿ‌ ಮಾಹಿತಿ ಸಿಕ್ಕಿದೆ ಎಂಬುದುನ್ನು ಪಡೆಯಲಾಗುವುದು ಎಂದು ಹೇಳಿದರು.

ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನೋಡಿ ಯಾರೋ ಹುಚ್ಚ ಅನ್ಕೊಂಡಿದ್ದ ...

ರಾಜ್ಯ ಸರ್ಕಾರಕ್ಕೆ ಹಣಕಾಸು ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಏಜೆನ್ಸಿಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ರಾಜ್ಯದ ಹಣಕಾಸಿನ ಸ್ಥಿತಿ ಯಾವ ರೀತಿ ಇಟ್ಟಿದ್ದರು‌ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಸಾಲ ಎಷ್ಟು ಮಾಡಿದ್ದರು, ಏನೆಲ್ಲ ದಿವಾಳಿ ಎಬ್ಬಿಸಿ ಹೋಗಿದ್ದರು ಅಂತ ಗೊತ್ತಿದೆ‌. ರಾಜ್ಯದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ನಾವು ಬದ್ಧವಾಗಿದ್ದೇವೆ. ಒಳ್ಳೆಯ ಆಡಳಿತ ನೀಡುತ್ತೇವೆ ಎಂದು ಚುನಾವಣಾ ಪೂರ್ವದಲ್ಲಿ ಜನರಿಗೆ ಭರವಸೆ ನೀಡಿದ್ದೇವೆ. ಗ್ಯಾರಂಟಿ ಕಾರ್ಯಕ್ರಮ ಕೊಟ್ಟಿರುವುದೇ ಇವರಿಗೆ ಹೊಟ್ಟೆ ಉರಿಯಾಗಿದೆ. ಬಿಜೆಪಿಯವರು ಯಾರು ಗ್ಯಾರಂಟಿ ಹಣ ತೆಗೆದುಕೊಳ್ಳುತ್ತಿಲ್ಲವೇ? ನಾವು ಪಕ್ಷ ಇಟ್ಟುಕೊಂಡು ಕೆಲಸ ಮಾಡಿದ್ದೇವೆಯೇ? ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಯೋಜನೆ ಕೊಟ್ಟಿದ್ದೇವೆಯೇ? ಎಂದು ಪ್ರಶ್ನಿಸಿದರು.

ರಾಜ್ಯದ ಆರ್ಥಿಕ ಸ್ಥಿತಿಯನ್ನು ಯಾವ ರೀತಿಯಾಗಿ ಸದೃಢ ಮಾಡಿಕೊಳ್ಳಬೇಕು. ಹೇಗೆ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ತೆಗೆದುಕೊಳ್ಳುವುದು ಇವರಿಗೆ ಹೊಟ್ಟೆಹುರಿಯಾದರೆ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆ ಎಲ್ಲಿಂದ ಔಷಧಿ ತರಲು ಸಾಧ್ಯ. ಹೆಚ್ಚು ಹಣ ಹೊಂದಿಸಿಕೊಂಡು, ಇದರ ಮೂಲಕ ರಾಜ್ಯದಲ್ಲಿ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಮುಂತಾದ ಕೆಲಸಗಳಾಗಬೇಕಿದೆ ಎಂದರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!