
ಮಂಗಳೂರು: ವಾರದಲ್ಲಿ ಎರಡು ದಿನ ಸಂಚರಿಸುತ್ತಿದ್ದ ಸೂರತ್–ಮಂಗಳೂರು ಜಂಕ್ಷನ್–ಸೂರತ್ ವಿಶೇಷ ರೈಲನ್ನು ಇದೀಗ ಶಾಶ್ವತ (ಕಾಯಂ) ರೈಲಾಗಿ ಪರಿವರ್ತಿಸಿ ಭಾರತೀಯ ರೈಲ್ವೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ಕರಾವಳಿ ಕರ್ನಾಟಕದ ಪ್ರಯಾಣಿಕರಿಗೆ ಮಹತ್ತರ ಅನುಕೂಲವಾಗಲಿದೆ.
ಇಲ್ಲಿಯವರೆಗೆ ವಿಶೇಷ ರೈಲಾಗಿ ಕಾರ್ಯನಿರ್ವಹಿಸುತ್ತಿದ್ದ ಈ ಸೇವೆ, ಕರಾವಳಿ ಭಾಗವನ್ನು ಮುಂಬೈ ಮೂಲಕ ಸೂರತ್ನೊಂದಿಗೆ ಸಂಪರ್ಕಿಸುವ ಪ್ರಮುಖ ಸಾರಿಗೆ ಮಾರ್ಗವಾಗಿತ್ತು. ಇದೀಗ ಅದನ್ನು ಕಾಯಂ ರೈಲಾಗಿ ಘೋಷಿಸಿರುವುದರಿಂದ ಪ್ರಯಾಣಿಕರಿಗೆ ನಿಯಮಿತ ಹಾಗೂ ವಿಶ್ವಾಸಾರ್ಹ ಸಂಪರ್ಕ ಲಭ್ಯವಾಗಲಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಈ ಸೌಲಭ್ಯವನ್ನು ಒದಗಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ರೈಲು ಸಂಖ್ಯೆ 19057 (ಸೂರತ್ → ಮಂಗಳೂರು ಜಂಕ್ಷನ್):
ಪ್ರತಿ ಬುಧವಾರ ಮತ್ತು ಭಾನುವಾರ ಸಂಜೆ 7:35ಕ್ಕೆ ಸೂರತ್ನಿಂದ ಹೊರಟು, ಮರುದಿನ ಸಂಜೆ 7:45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ಸಂಖ್ಯೆ 19058 (ಮಂಗಳೂರು ಜಂಕ್ಷನ್ → ಸೂರತ್):
ಪ್ರತಿ ಸೋಮವಾರ ಮತ್ತು ಗುರುವಾರ ರಾತ್ರಿ 10:30ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ ರಾತ್ರಿ 11:45ಕ್ಕೆ ಸೂರತ್ ತಲುಪಲಿದೆ.
ಈ ರೈಲು ಸೇವೆ ಕರಾವಳಿ ಕರ್ನಾಟಕದಿಂದ ಮುಂಬೈ ಹಾಗೂ ಸೂರತ್ ಕಡೆ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸುಲಭ ಮತ್ತು ಅನುಕೂಲಕರ ಸಂಪರ್ಕವನ್ನು ಒದಗಿಸುವ ನಿರೀಕ್ಷೆಯಿದೆ. ಜೊತೆಗೆ ವ್ಯಾಪಾರ, ಉದ್ಯೋಗ ಹಾಗೂ ವೈಯಕ್ತಿಕ ಪ್ರಯಾಣಗಳಿಗೆ ಇದು ಪ್ರಮುಖ ಸಾರಿಗೆ ಮಾರ್ಗವಾಗಿ ರೂಪುಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ