Suspected terrorist bengaluru: ಉಗ್ರರ ಪತ್ತೆಗೆ ವಿಶೇಷ ಪೊಲೀಸ್‌ ತಂಡ ರಚನೆ

Published : Jul 21, 2023, 05:55 AM IST
Suspected terrorist bengaluru: ಉಗ್ರರ ಪತ್ತೆಗೆ ವಿಶೇಷ ಪೊಲೀಸ್‌ ತಂಡ ರಚನೆ

ಸಾರಾಂಶ

ಐವರು ಶಂಕಿತ ಎಲ್‌ಇಟಿ ಉಗ್ರರ ಬಂಧನ ಬೆನ್ನಲ್ಲೇ ರಾಜಧಾನಿಯಲ್ಲಿ ರಹಸ್ಯವಾಗಿ ಬೇರೂರಿರುವ ‘ಉಗ್ರ ಜಾಲ’ವನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ.

ಬೆಂಗಳೂರು (ಜು.21):  ಐವರು ಶಂಕಿತ ಎಲ್‌ಇಟಿ ಉಗ್ರರ ಬಂಧನ ಬೆನ್ನಲ್ಲೇ ರಾಜಧಾನಿಯಲ್ಲಿ ರಹಸ್ಯವಾಗಿ ಬೇರೂರಿರುವ ‘ಉಗ್ರ ಜಾಲ’ವನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ.

ಬೆಂಗಳೂರಿನ ವಿಧ್ವಂಸಕ ಕೃತ್ಯ ನಡೆಸಲು ಎಲ್‌ಇಟಿ ಸಂಘಟನೆ ಸಂಚು ರೂಪಿಸಿತ್ತು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಶಂಕಿತ ಉಗ್ರರನ್ನು ಬಂಧಿಸಿದೆ. ಬಳಿಕ ನ್ಯಾಯಾಲಯಕ್ಕೆ ಶಂಕಿತ ಭಯೋತ್ಪಾದಕರನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ 7 ದಿನ ಪೊಲೀಸ್‌ ಕಸ್ಟಡಿಗೆ ಪಡೆದಿದ್ದಾರೆ.

ಶಂಕಿತ ಉಗ್ರನ ಮನೇಲಿ 4 ಸಜೀವ ಗ್ರೆನೇಡ್‌ ವಶಕ್ಕೆ!

ಬೆಂಗಳೂರು ನಗರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತದೆ. ಇದಕ್ಕಾಗಿ ತನಿಖಾಧಿಕಾರಿ ಸೇರಿ ಇಬ್ಬರು ಎಸಿಪಿ ಹಾಗೂ 6 ಇನ್ಸ್‌ಪೆಕ್ಟರ್‌ಗಳ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್‌ ಜಂಟಿ ಆಯುಕ್ತ (ಅಪರಾಧ) ಡಾ.ಎಸ್‌.ಡಿ.ಶರಣಪ್ಪ(City Police Joint Commissioner (Crime) Dr. SD Sharanappa) ತಿಳಿಸಿದ್ದಾರೆ.

ಈ ವಿಶೇಷ ತಂಡವು ವಿಧ್ವಂಸಕ ಕೃತ್ಯದ ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಹಮದ್‌ ಜುನೈದ್‌ನ ಸಂಪರ್ಕ ಜಾಲ ಶೋಧನೆಗಿಳಿದಿದ್ದು, ಬಂಧಿತ ಜುನೈದ್‌ನ ಸಹಚರರಿಗೆ ಆರ್ಥಿಕ ಹಾಗೂ ಶಸ್ತ್ರಾಸ್ತ್ರ ನೆರವು ನೀಡಿದವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು