ಮೈಸೂರು: ನಾಡಹಬ್ಬ ದಸರಾ ಹೊತ್ತಲ್ಲಿ ರೇವ್ ಪಾರ್ಟಿ? ಸಾಂಸ್ಕೃತಿಕ ನಗರಿಯಲ್ಲಿ ಇದೆಂಥ ವಿಕೃತಿ!

Published : Sep 29, 2024, 12:01 PM ISTUpdated : Sep 30, 2024, 08:44 AM IST
ಮೈಸೂರು: ನಾಡಹಬ್ಬ ದಸರಾ ಹೊತ್ತಲ್ಲಿ ರೇವ್ ಪಾರ್ಟಿ? ಸಾಂಸ್ಕೃತಿಕ ನಗರಿಯಲ್ಲಿ ಇದೆಂಥ ವಿಕೃತಿ!

ಸಾರಾಂಶ

ನಾಡಹಬ್ಬ ದಸರಾ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ದೀಪಾಲಂಕಾಗಳಿಂದ ಕಂಗೊಳಿಸುತ್ತಿದೆ. ಈ ನಡುವೆ ನಗರದ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಮೈಸೂರು (ಸೆ.29): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವದ ತಯಾರಿ ಅದ್ದೂರಿಯಾಗಿ ನಡೆದಿದೆ. ಎಲ್ಲೆಡೆ ದೀಪಗಳಿಂದ ಅಲಂಕಾರಿಸಲಾಗಿದೆ. ಅ.3 ರಿಂದ ದಸರಾ ಹಬ್ಬಕ್ಕೆ ಚಾಲನೆ ನೀಡಲು ಎಲ್ಲ ತಯಾರಿ ನಡೆದಿದೆ. ಈ ನಡುವೆ ಮೈಸೂರಿನ ಹೊರವಲಯದ ಕೆಆರ್​ಎಸ್​ ಬ್ಯಾಕ್​ ವಾಟರ್​ನಲ್ಲಿ ನೂರಕ್ಕೂ ಅಧಿಕ ಯುವತಿ-ಯುವತಿಯರಿಂದ ರೇವಾ ಪಾರ್ಟಿ ನಡೆದಿರುವ ಎಂಬ ಅನುಮಾನ ವ್ಯಕ್ತವಾಗಿದೆ. ಖಚಿತ ಮಾಹಿತಿ ಮೇರೆಗೆ ಮೈಸೂರು ಪೊಲೀಸರು ದಾಳಿ ನಡೆಸಿ ಸುಮಾರು 50ಕ್ಕೂ ಯುವಕ-ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ  ಎ.ಎಸ್.ಪಿ  ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ ನೇತೃತ್ವದಲ್ಲಿ ಪಾರ್ಟಿ ನಡೆಯುತ್ತಿದ್ದ ಸ್ಳಳಕ್ಕೆ ತೆರಳಿ ದಾಳಿ ನಡೆಸಿದ ಪೊಲೀಸರು. ಪೊಲೀಸರು ಬರುತ್ತಿದ್ದಂತೆ ಕುಡಿದು ತೂರಾಡುತ್ತಿದ್ದ ಯುವಕ-ಯುವತಿಯರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.  ಪಾರ್ಟಿಯಲ್ಲಿ ಭಾಗಿಯಾಗಿದ್ದ 50ಕ್ಕೂ ಯುವಕರನ್ನು ವಶಕ್ಕೆ ಪಡೆದಿರುವ ಪೊಲೀಸರು. ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳು ಯತ್ನಿಸಿದ್ದಾರೆ. ವಶಕ್ಕೆ ಪಡೆಯುವ ವೇಳೆ ಕುಡಿದ ಮತ್ತಿನಲ್ಲಿ ಪೊಲೀಸರು ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಆರೋಪವೂ ಕೇಳಿಬಂದಿದೆ.  ಸದ್ಯ ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ. ಮದ್ಯ, ಸಿಗರೇಟ್ ಸ್ಥಳದಲ್ಲಿ ಪತ್ತೆಯಾಗಿವೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳಿಸಿರುವ ಪೊಲೀಸರು. ಪಾರ್ಟಿ ನಡೆದ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿದ್ದ ಪರಿಶೀಲನೆ ನಡೆಸಿದ್ದಾರೆ. ವರದಿ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಬೆಂಗಳೂರು ರೇವ್‌ ಪಾರ್ಟಿ ಪ್ರಕರಣ: ಮಾಧ್ಯಮ ಹೇಳಿಕೆ ನೀಡದಂತೆ ನಟಿ ಹೇಮಾಗೆ ಕಲಾವಿದರ ಸಂಘ ವಾರ್ನ್!

ಒಂದೆಡೆ ದಸರಾ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಅತ್ತ ಮೈಸೂರು ಹೊರವಲಯದಲ್ಲಿ ದಸರಾ ಹಬ್ಬವನ್ನೇ ನೆಪ ಮಾಡಿಕೊಂಡು ಯುವಕರನ್ನ ಒಂದೆಡೆ ಸೇರಿಸಿ ರೇವ್ ಪಾರ್ಟಿನಡೆಸಿದ್ದರು ಎನ್ನಲಾಗಿದೆ. ಈ ಪಾರ್ಟಿಗೆ ಇಸ್ರೇಲ್​ನಿಂದ ರ್ಯಾಪರ್​ ಗ್ರೇನ್ ರಿಪ್ಪರ್(Rapper Grain Ripper) ಕರೆಸಿದ್ದರು ಎನ್ನಲಾಗಿದೆ. ಪಾರ್ಟಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದರು. ಆಯೋಜಕರು ಪ್ರತಿಯೊಬ್ಬರಿಗೂ 2000 ರೂ. ನಿಗದಿ ಮಾಡಿದ್ದರು ಎನ್ನಲಾಗಿದೆ. ಆಯೋಜಿಸಿದವರು ಯಾರು? ಪಾರ್ಟಿಯಲ್ಲಿ ಮಾದಕ ವಸ್ತು ಬಳಕೆಯಾಗಿತ್ತೆ? ಎಲ್ಲ ಆಯಾಮಗಳಲ್ಲಿ ವಿಚಾರಣೆಗೆ ಮುಂದಾಗಿರುವ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ