ಪ್ರವಾಹದಲ್ಲಿ ಸಿಲುಕಿದ್ದ 300 ಮಂದಿ ರಕ್ಷಣೆ; ರಾವಸಾಬ- ನಂಜಯಗೆ ಶೌರ್ಯ ಪ್ರಶಸ್ತಿ ಗರಿ!

Suvarna News   | Asianet News
Published : Dec 21, 2019, 09:18 PM ISTUpdated : Dec 21, 2019, 11:06 PM IST
ಪ್ರವಾಹದಲ್ಲಿ ಸಿಲುಕಿದ್ದ 300 ಮಂದಿ ರಕ್ಷಣೆ; ರಾವಸಾಬ- ನಂಜಯಗೆ ಶೌರ್ಯ ಪ್ರಶಸ್ತಿ ಗರಿ!

ಸಾರಾಂಶ

ಪ್ರಾಕೃತಿಕ ವಿಕೋಪ, ಅಪಘಾತ, ಅನಾಹುತಾಗಳಾದ ಜೀವ ಉಳಿಸಿಕೊಂಡರೆ ಸಾಕು ಅನ್ನೋದು ಎಲ್ಲರ ಬಯಕೆ. ಇದು ಸಹಜ ಕೂಡ. ಈ ಪರಿಸ್ಥಿತಿಯಲ್ಲಿ ತಮ್ಮ ಪ್ರಾಣಕ್ಕಿಂತ ಇತರರ ಪ್ರಾಣ ಉಳಿಸುವುದೇ ದೊಡ್ಡ ಕಾರ್ಯ ಎಂದು ನಂಬಿರುವವರ ಸಂಖ್ಯೆ ತೀರಾ ಕಡಿಮೆ. ಹೀಗೆ ಈ ಬಾರಿಯ ಪ್ರವಾಹದಲ್ಲಿ ಸಿಲುಕಿದ್ದ 300 ಮಂದಿ ಹಾಗೂ ನೂರೂರು ಜಾನುವರ ರಕ್ಷಿಸಿ, ಸುವರ್ಣನ್ಯೂಸ್-ಕನ್ನಡ ಪ್ರಭ ಪ್ರಶಸ್ತಿ ಪಡೆದ ಬೆಳಗಾವಿಯ  ರಾವಸಾಬ- ನಂಜಯ ಅಂಬಿಯ ಸಾಹಸಗಾಥೆ ಹಾಗೂ ಕಿರು ಪರಿಚಯ ಇಲ್ಲಿದೆ.  

ಬೆಂಗಳೂರು(ಡಿ.21): ಈ ವರ್ಷ ಸುರಿದ ಭೀಕರ ಮಳೆ ಹಾಗೂ ಪ್ರವಾಹದ ರಾಜ್ಯದ ಜನತೆಯ ನಗುವನ್ನೇ ಕಸಿದಿದೆ.  ಉತ್ತರ ಕರ್ನಾಟಕ, ಕೊಡುಗು ಸೇರಿದಂತೆ ಕರ್ನಾಟಕದ ಹಲವು ಭಾಗಗಳು ಪ್ರವಾಹಕ್ಕೆ ತತ್ತರಿಸಿತ್ತು.  ಈ ಪ್ರವಾಹದಲ್ಲಿ ಸಿಲುಕಿದ್ದ ಬರೋಬ್ಬರಿ 300 ಮಂದಿಯನ್ನು ಹಾಗೂ ನೂರಾರು ಜಾನುವಾರು ರಕ್ಷಿಸಿದ ಬೆಳಗಾವಿಯ ತಂದೆ-ಮಗ ರಾವಸಾಬ ಅಂಬ ಹಾಗೂ ನಂಜಯ ಅಂಬಿ ಈ ವರ್ಷದ ಸುವರ್ಣನ್ಯೂಸ್, ಕನ್ನಡಪ್ರಭ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾವಸಾಬ ಅಂಬಿ ಹಾಗೂ ನಂಜಯ ಅಂಬಿ ಸಾಧನೆ:
ವೃತ್ತಿಯಲ್ಲಿ ಅಂಬಿಗರಾದ ಬೆಳಗಾವಿಯ ಖೇಮಲಾಪುರ ಗ್ರಾಮದ ತಂದೆ ಮಗ ರಾವಸಾಬ ಅಂಬಿ ಹಾಗೂ ನಂಜಯ ಅಂಬಿ ಪ್ರವಾಹದಲ್ಲಿ ಜೀವದ ಹಂಗು ತೊರೆದು ಇತರರ ಪ್ರಾಣ ಉಳಿಸಿದ ವೀರರು. ಖೇಮಲಾಪುರ ಮತ್ತು ಕೃಷ್ಣಾ ಕಿತ್ತೂರು ಗ್ರಾಮದ ಲ್ಲಿ ಬೋಟ್ ನಡೆಸುತ್ತಿರುವ ತಂದೆ-ಮಗ ಈ ಗ್ರಾಮದ ಪಾಲಿಗೆ ದೇವರಾಗಿದ್ದಾರೆ. ರಣಭೀಕರ ಮಳೆ ಹಾಗೂ ಪ್ರವಾಹದಿಂದ ಕೃಷ್ಣ ನದಿ ತುಂಬಿ ಹರಿದಿತ್ತು. ಕೃಷ್ಣಾ ನದಿಯ ಪ್ರವಾಹದ ನೀರು ಕಿತ್ತೂರು ಗ್ರಾಮವನ್ನೇ ಜಲಾವೃತ ಮಾಡಿತ್ತು. ಈ ಪ್ರವಾಹದಲ್ಲಿ ಸಿಲುಕಿದ್ದ 300 ಜನರನ್ನು ತಂದೆ ರಾವಸಾಬ ಅಂಬಿ ಹಾಗೂ ಮಗ ನಂಜಯ ಅಂಬಿ ತಮ್ಮ ಬೋಟ್ ಮೂಲಕ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

ಪ್ರಾಣ ಒತ್ತೆಯಿಟ್ಟು ಇನ್ನೊಬ್ಬರ ಜೀವ ಕಾಪಾಡಿದವರಿಗೆ ಕನ್ನಡಪ್ರಭ-ಸುವರ್ಣ ನ್ಯೂಸ್ ಶೌರ್ಯ ಪ್ರಶಸ್ತಿ

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ನೂರಾರು ಜಾನುವಾರುಗಳನ್ನು ಬೋಟ್ ಮೂಲಕ ರಕ್ಷಿಸಿದ್ದಾರೆ.  ರಕ್ಷಣಾ ತಂಡ ಬೆಳಗಾವಿ ಪ್ರವೇಶಿಸುವಾಗ ರಾವಸಾಬ ಅಂಬಿ ಹಾಗೂ ನಂಜಯ ಅಂಬಿ ಹಲವರನ್ನು ರಕ್ಷಿಸಿದ್ದರು. ಪ್ರವಾಹ ಮೀತಿ ಮೀರಿದಾಗ ಜಿಲ್ಲಾಡಳಿತ ಯಾರೂ ಕೂಡ ನದಿ ಪಾತ್ರದ ಕಡೆಗೆ ತೆರಳದಂತೆ ಎಚ್ಚರಿಕೆ ನೀಡಿತ್ತು. ಆದರೆ ನದಿ ಪಾತ್ರದಲ್ಲಿ ಸಿಲುಕಿದ್ದ ಗ್ರಾಮದ ಜನರನ್ನು ರಕ್ಷಿಸಲು ಜಿಲ್ಲಾಡಳಿತದ ಬಳಿ ಯಾವ ಅಸ್ತ್ರಗಳು ತಕ್ಷಣಕ್ಕೆ ಇರಲಿಲ್ಲ. ಹೀಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ತಂದೆ ಮಗ ಹಲವರ ಜೀವ ಉಳಿಸಿದ್ದಾರೆ.

ಹೆಸರು: ರಾವಸಾಬ ಅಂಬಿ, ‘ನಂಜಯ ಅಂಬಿ(ತಂದೆ ಮಗ)
ಊರು:  ಖೇಮಲಾಪುರ ಗ್ರಾಮ, ಬೆಳಗಾವಿ
ಸಂಪರ್ಕ:    9743992297  (‘ನಂಜಯ ಅಂಬಿ)
ವೃತ್ತಿ:  ಅಂಬಿಗ
ಸಾಧನೆ : ಪ್ರವಾಹದಲ್ಲಿ ಸಿಲುಕಿದ 300 ಮಂದಿ ಹಾಗೂ ಕೊಚ್ಚಿ ಹೋಗುತ್ತಿದ್ದ ನೂರಾರು ಜಾನುವಾರ ರಕ್ಷಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!