ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

Published : Mar 05, 2024, 06:27 AM IST
ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

ಸಾರಾಂಶ

ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

 ಬೆಂಗಳೂರು (ಮಾ.5) : ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ರದ್ದಾದ ರೈಲುಗಳು:

ಡಾ। ಎಂಜಿಆರ್‌ ಚೆನ್ನೈ ಸೆಂಟ್ರಲ್- ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ (16021) ಮಾ.6, 7ರಂದು ರದ್ದುಗೊಳಿಸಲಾಗಿದೆ. ಮೈಸೂರು-ಕೆಎಸ್‌ಆರ್‌ ಬೆಂಗಳೂರು ಪ್ರತಿದಿನದ ಎಕ್ಸ್‌ಪ್ರೆಸ್ (20623) ಮಾ.7, 8ರಂದು ರದ್ದು, ಕೆಎಸ್‌ಆರ್‌ ಬೆಂಗಳೂರು-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ (20624) ಮಾ.7, 8ರಂದು, ಮೈಸೂರು- ಡಾ। ಎಂಜಿಆರ್‌ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ (16022) ಮಾ.7, 8ರಂದು, ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ ರೈಲು (06267) ಮಾ.7, 12ರಂದು ಹಾಗೂ ಮೈಸೂರು- ಎಸ್‌ಎಂವಿಟಿ ಬೆಂಗಳೂರು ಪ್ರತಿದಿನದ ಎಕ್ಸ್‌ಪ್ರೆಸ್ (06269) ಮಾ.7, 12ರಂದು ರದ್ದಾಗಿದೆ.

ತುಮಕೂರು-ದಾವಣಗೆರೆ, ಗದಗ-ವಾಡಿ ರೈಲ್ವೆ ಯೋಜನೆಗಳಿಗೆ ₹ 93.32 ಕೋಟಿ ಬಿಡುಗಡೆ: ಎಂ.ಬಿ. ಪಾಟೀಲ

ಮೈಸೂರು-ಕೆಎಸ್‌ಆರ್‌ ಬೆಂಗಳೂರು ಮೆಮು (06560) ಮಾ.7, 12ರಂದು, ಎಸ್‌ಎಂವಿಟಿ ಬೆಂಗಳೂರು- ಮೈಸೂರು ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ (06270) ಮಾ.7, 12ರಂದು, ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು (06268) ಮಾ.8, 13ರಂದು, ಕೆಎಸ್‌ಆರ್‌ಬೆಂಗಳೂರು-ಮೈಸೂರು ಮೆಮು ವಿಶೇಷ ರೈಲು (06559) ಮಾ.8, 13ರಂದು ಹಾಗೂ ಕೆಎಸ್‌ಆರ್‌ ಬೆಂಗಳೂರು - ಚನ್ನಪಟ್ಟಣ ಮೆಮು ಸ್ಪೆಷಲ್ (01763) ಮಾ.8, 13ರಂದು ರದ್ದು ಮಾಡಲಾಗಿದೆ.

ಭಾನುವಾರದಂದೇ ಮೂರು ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ!

ಭಾಗಶಃ ರದ್ದಾದ ರೈಲುಗಳು

ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು (06526) ಮಾ.7, 12ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್‌ ಬೆಂಗಳೂರು ನಡುವೆ ಭಾಗಶಃ ರದ್ದು ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ