ಮಧ್ಯವರ್ತಿಗಳ ಹಾವಳಿ: ಕಚೇರಿ ಮುಖ್ಯದ್ವಾರದಲ್ಲೇ ಚೇರ್ ಹಾಕಿ ಕುಳಿತ ತಹಶೀಲ್ದಾರ್!

Published : Sep 14, 2023, 01:13 PM IST
ಮಧ್ಯವರ್ತಿಗಳ ಹಾವಳಿ: ಕಚೇರಿ ಮುಖ್ಯದ್ವಾರದಲ್ಲೇ ಚೇರ್ ಹಾಕಿ ಕುಳಿತ ತಹಶೀಲ್ದಾರ್!

ಸಾರಾಂಶ

ತಹಶೀಲ್ದಾರ್ ಕಚೇರಿಯ ಮಧ್ಯವರ್ತಿಗಳ ಹಾವಳಿ ಮುಖ್ಯದ್ವಾರದಲ್ಲಿ ಚೇರ್ ಹಾಕಿಕೊಂಡ ಕುಳಿತ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ತುಮಕೂರು (ಸೆ.14): ತಹಶೀಲ್ದಾರ್ ಕಚೇರಿಯ ಮಧ್ಯವರ್ತಿಗಳ ಹಾವಳಿ ಮುಖ್ಯದ್ವಾರದಲ್ಲಿ ಚೇರ್ ಹಾಕಿಕೊಂಡ ಕುಳಿತ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ಕೊರಟಗೆರೆ ತಹಸೀಲ್ದಾರ್ ಮುನಿಸ್ವಾಮಿ ತಾಲೂಕು ಕಚೇರಿ ಮುಖ್ಯದ್ವಾರದಲ್ಲೇ ಚೇರ್ ಹಾಕಿ ಕುಳಿತು ಕೆಲಸ ನಿರ್ವಹಿಸುತ್ತಿರುವುದು ಎಲ್ಲೆಡೆ ವೈರಲ್ ಆಗಿದೆ. ಕೊರಟಗೆರೆ ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಹಲವು ಬಾರಿ ಎಚ್ಚರಿಕೆ ನೀಡಿದ್ರೂ, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಧ್ಯವರ್ತಿಗಳ‌ ಹಾವಳಿ ತಡೆಯುವಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಎಚ್ಚೆತ್ತ ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ , ಈ ಬಾರಿ ತಮ್ಮ ಕಚೇರಿ ಕೊಠಡಿಯಿಂದ‌ ಹೊರ ಬಂದು  ತಾಲ್ಲೂಕು ಕಚೇರಿಯ ಮುಖ್ಯದ್ವಾರದಲ್ಲೇ ಕುರ್ಚಿ ಹಾಕಿ ಕುಳಿತು ಸಾರ್ವಜನಿಕರ ದೂರು ಆಲಿಸಿದ್ದಾರೆ. 

 ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

 

 ಮಧ್ಯವರ್ತಿಗಳ ಬಳಿಗೆ ಹೋಗದೆ ನೇರವಾಗಿ ತಮ್ಮ‌ ಬಳಿಯೇ ಬರುವಂತೆ ಸಾರ್ವಜನಿಕರಿಗೆ ಮನವರಿಕೆ‌ ಮಾಡಿಕೊಟ್ಟಿದ್ದಾರೆ‌.‌ ತಹಶೀಲ್ದಾರ್ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು  ಪ್ರಶಂಸೆ ವ್ಯಕ್ತವಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ