
ಬೆಂಗಳೂರು(ಅ.27): ನಗರದ ಜಾಲಹಳ್ಳಿಯಲ್ಲಿರುವ ಎಚ್ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಚ್ಎಂಟಿಯ 5 ಎಕರೆ ಜಾಗವನ್ನು ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವಾಪಸ್ ಪಡೆದುಕೊಂಡಿರುವ ನಡೆಗೆ ತೀವ್ರವಾಗಿ ಕಿಡಿಕಾರಿದರು. ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರಲ್ಲಿ ಸರ್ಕಾರಕ್ಕೆ ಹಿನ್ನೆಡೆಯಾಗುವುದು ಖಚಿತ ಎಂದು ಹೇಳಿದರು.
ಎಚ್ಎಂಟಿಗೆ ನೀಡಿದ ಅರಣ್ಯ ಜಾಗ ಕೇಂದ್ರದ್ದಲ್ಲ, ರಾಜ್ಯದ್ದು: ಸಚಿವ ಈಶ್ವರ್ ಖಂಡ್ರೆ
ಶ್ರೀನಿವಾಸಪುರದಲ್ಲಿ ಮಾಜಿ ಸಭಾಧ್ಯಕ್ಷರೊಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಮನಹರಿಸಬೇಕು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಅದನ್ನು ನೋಡಲಿ, ಎಷ್ಟು ಎಕರೆ ಲೂಟಿಯಾಗಿದೆ ಎಂಬುದು ಗಮನಿಸಲಿ ಎಂದು ಕಿಡಿಕಾರಿದರು.
ಸರ್ಕಾರವು ಎಚ್ಎಂಟಿಯ ಐದು ಎಕರೆಗೆ ಬಲವಂತವಾಗಿ ಹೋಗಿ ಬೇಲಿ ಹಾಕಿದೆ. ನ್ಯಾಯಾಲಯದ ಆದೇಶಗಳಿಗೆ ಯಾರೇ ಆಗಲಿ ತಲೆ ಬಾಗಬೇಕಾಗುತ್ತದೆ. ಸರ್ಕಾರದ ನಡೆಯ ವಿರುದ್ಧ ನಾವು ನ್ಯಾಯಾಲಯದಲ್ಲಿ ಹೋರಾಡುತ್ತೇವೆ ಎಂದು ಹೇಳಿದರು.
ಎಚ್ಎಂಟಿಗೆ ನೀಡಿದ್ದ ಅರಣ್ಯ ಜಾಗ ಮಾತ್ರ ವಶಕ್ಕೆ: ಸಚಿವ ಖಂಡ್ರೆ
ಬೀದರ್: ಎಚ್ಎಂಟಿ ಕಂಪನಿಗೆ ನೀಡಿದ್ದ ಅರಣ್ಯ ಭೂಮಿ ವಾಪಸ್ ಪಡೆದಿರುವ ವಿಚಾರವಾಗಿ ಕಾಂಗ್ರೆಸ್ ಹೈಜಾಕ್ ರಾಜಕೀಯ ಮಾಡುತ್ತಿದೆ ಎಂಬ ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಹೇಳಿಕೆಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ನನ್ನಪ್ಪ ನಂಗೆ HMT Watch ಕಟ್ಟಿದ್ರು, ನೀವೂ ಕಟ್ಕೊಳಿ ಎಂದ ನಿಖಿಲ್ ಕುಮಾರಸ್ವಾಮಿ!
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಕೇವಲ ಹಿಟ್ ಆ್ಯಂಡ್ ರನ್ ಮಾಡುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಹಿಂಪಡೆದದ್ದು ಎಚ್ಎಂಟಿ ಭೂಮಿ ಅಲ್ಲ, ಕಂಪನಿಯ ಭೂಮಿ ಎಂಬುದಕ್ಕೆ ಅವರ ಬಳಿ ಏನಾದರೂ ದಾಖಲೆ ಇದೆಯಾ? ಎಚ್ಎಂಟಿ ಅವರಿಗೆ ರಿಯಲ್ ಎಸ್ಟೇಟ್, ಭೂಮಿ ವ್ಯಾಪಾರ ಮಾಡಲು ನಮ್ಮ ಭೂಮಿ ಕೊಡಬೇಕಾ? ಎಚ್ಎಂಟಿಗೆ ನೀಡಿದ್ದ ಅರಣ್ಯ ಭೂಮಿ ವಾಪಸ್ ಪಡೆದಿದ್ದೇವೆ ಅಷ್ಟೆ ಎಂದರು.
ಅರಣ್ಯ ಭೂಮಿ ಪರಭಾರೆ ಮಾಡಲು ಆಗಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಕಾಯ್ದೆ ಪ್ರಕಾರ ನಮ್ಮ ಇಲಾಖೆಯವರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ ಒಂದು ಕೋಟಿಗೂ ಅಧಿಕ ಜನರಿದ್ದಾರೆ, ಮೂಲ ಸೌಕರ್ಯ ಹಾಳಾಗಿ ಹೋಗಿದೆ. ಲಂಗ್ ಸೇಸ್ ಮಾಡುವ ಅವಶ್ಯಕತೆ ಇದ್ದು, ಅದನ್ನು ಮಾಡೇ ಮಾಡುತ್ತೇವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ