ಸೋಂಕು ಹೆಚ್ಚಳ: ರಾಜ್ಯದಿಂದ ತಮಿಳುನಾಡು, ಕೇರಳಕ್ಕೆ ರೈಲು ಸಂಚಾರ ಸ್ಥಗಿತ

Kannadaprabha News   | Asianet News
Published : May 08, 2021, 08:15 AM ISTUpdated : May 08, 2021, 08:18 AM IST
ಸೋಂಕು ಹೆಚ್ಚಳ: ರಾಜ್ಯದಿಂದ ತಮಿಳುನಾಡು, ಕೇರಳಕ್ಕೆ ರೈಲು ಸಂಚಾರ ಸ್ಥಗಿತ

ಸಾರಾಂಶ

ಆರು ರೈಲುಗಳ ಸಂಚಾರ ಸ್ಥಗಿತ| ಚೆನ್ನೈ-ಕೆಎಸ್‌ಆರ್‌ ಬೆಂಗಳೂರು-ಚೆನ್ನೈ ಎಸಿ ಡಬಲ್‌ ಡೆಕ್ಕರ್‌ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು, ಚೆನ್ನೈ-ಕೆಎಸ್‌ಆರ್‌ ಬೆಂಗಳೂರು-ಚೆನ್ನೈ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು ಹಾಗೂ ಎರ್ನಾಕುಲಂ-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲುಗಳ ಸಂಚಾರ ಮೇ 8ರಿಂದ ಮೇ 31ರವರೆಗೆ ಸ್ಥಗಿತ|   

ಬೆಂಗಳೂರು(ಮೇ.08):  ಕೊರೋನಾ ಸೋಂಕು ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಕುಸಿದಿರುವ ಹಿನ್ನೆಲೆಯಲ್ಲಿ ನೈಋುತ್ಯ ರೈಲ್ವೆ ನಗರದಿಂದ ತಮಿಳುನಾಡು ಹಾಗೂ ಕೇರಳ ರಾಜ್ಯಕ್ಕೆ ಸಂಚರಿಸುವ ಆರು ರೈಲುಗಳ ಸಂಚಾರ ಸ್ಥಗಿತಗೊಳಿಸಿದೆ. 

ಚೆನ್ನೈ-ಕೆಎಸ್‌ಆರ್‌ ಬೆಂಗಳೂರು-ಚೆನ್ನೈ ಎಸಿ ಡಬಲ್‌ ಡೆಕ್ಕರ್‌ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು, ಚೆನ್ನೈ-ಕೆಎಸ್‌ಆರ್‌ ಬೆಂಗಳೂರು-ಚೆನ್ನೈ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು ಹಾಗೂ ಎರ್ನಾಕುಲಂ-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲುಗಳ ಸಂಚಾರವನ್ನು ಮೇ 8ರಿಂದ ಮೇ 31ರವರೆಗೆ ಸ್ಥಗಿತಗೊಳಿಸಲಾಗಿದೆ. 

"

ಮುಂಬೈನಿಂದಲೂ ವಲಸೆ: ಕಾರ್ಮಿಕರಿಗೆ ಮತ್ತೆ ಉದ್ಯೋಗ ನಷ್ಟ!

ಕೆಎಸ್‌ಆರ್‌ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು ಮೇ 9ರಿಂದ ಜೂನ್‌ 1ರವರೆಗೆ, ಎರ್ನಾಕುಲಂ-ಬಾಣಸವಾಡಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು ಮೇ. 9ರಿಂದ ಮೇ 30ರ ವರೆಗೆ ಮತ್ತು ಬಾಣಸವಾಡಿ-ಎರ್ನಾಕುಲಂ ಎಕ್ಸ್‌ಪ್ರೆಸ್‌ ಸ್ಪೆಷಲ್‌ ರೈಲು ಸಂಚಾರವನ್ನು ಮೇ. 10ರಿಂದ ಮೇ. 31ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ