‘ಟಿಪ್ಪು ಜಯಂತಿ : ಸಿಎಂ, ಡಿಸಿಎಂರಿಂದ ಮುಸ್ಲಿಮರಿಗೆ ಅವಮಾನ’

Published : Nov 10, 2018, 01:12 PM IST
‘ಟಿಪ್ಪು ಜಯಂತಿ : ಸಿಎಂ, ಡಿಸಿಎಂರಿಂದ ಮುಸ್ಲಿಮರಿಗೆ ಅವಮಾನ’

ಸಾರಾಂಶ

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದ್ದು ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಇಬ್ಬರೂ ಕೂಡ ಜಯಂತಿ ಆಚರಣೆಗೆ ಗೈರಾಗಿದ್ದಾರೆ . ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು:  ಟಿಪ್ಪು ಜಯಂತಿ ಆಚರಣೆಗೆ ಸಿಎಂ ಕುಮರಸ್ವಾಮಿ ಹಾಗೂ ಡಿಸಿಎಂ ಗೈರುಹಾಜರಿ ವಿಚಾರಕ್ಕೆ ಸಂಬಂಧಿಸಿದಂತೆ   ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಸಿಎಂ ಹಾಗೂ ಡಿಸಿಎಂ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ.  ನಾನು ರಾಜಕೀಯ ಹೊರತುಪಡಿಸಿ ಮಾತನಾಡುತ್ತಿದ್ದೇನೆ.  ಸಿಎಂ ಅನಾರೋಗ್ಯ ಕಾರಣಗಳಿಂದ ಗೈರಾಗುತ್ತಿದ್ದಾರೆ. 

ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ.  ಸಿಎಂ ಇನ್ನಾದರೂ ಎಲ್ಲಿದ್ದಾರೋ ಅ ಸ್ಥಳದಲ್ಲಿಯೇ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗ ವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಸಿಎಂ ಹೆಚ್ಡಿಕೆಗೆ ಶಾಸಕ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ. 
 
ಇನ್ನು ಎಲ್ಲೆಡೆ ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ  ಈ ಬಗ್ಗೆಯೂ ಮಾತನಾಡಿದ ಅವರು ಪೊಲೀಸ್ ನಿರ್ಬಂಧ ಹೇರಿ ಕಾರ್ಯಕ್ರಮ ಆಚರಣೆ ಮಾಡುವ ರೀತಿ ಸರಿಯಲ್ಲ. ಕರ್ಫ್ಯೂ ಹೇರಿದ ಹಿನ್ನೆಲೆ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ.  ಬೈಕ್ ನಲ್ಲಿ ಇಬ್ಬರು ಬಂದರೂ ಕೂಡ ಪೊಲೀಸರು ಪ್ರಶ್ನಿಸುತ್ತಾರೆ ಇದು ಸರಿಯಲ್ಲ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!