ಕೋಲಾರ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಕೃತ್ಯ; ಶಾಲಾ ಮಕ್ಕಳಿಂದಲೇ ಟಾಯ್ಲೆಟ್ ಕ್ಲೀನ್ ಮಾಡಿಸಿದ ಶಿಕ್ಷಕರು!

Published : Dec 22, 2023, 12:43 PM ISTUpdated : Dec 22, 2023, 01:27 PM IST
ಕೋಲಾರ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಕೃತ್ಯ; ಶಾಲಾ ಮಕ್ಕಳಿಂದಲೇ ಟಾಯ್ಲೆಟ್ ಕ್ಲೀನ್ ಮಾಡಿಸಿದ ಶಿಕ್ಷಕರು!

ಸಾರಾಂಶ

ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಅದು ರಾಜ್ಯ ರಾಜಧಾನಿಯಲ್ಲೇ ನಡೆದಿರುವುದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಯಾವ ಎಂಥ ವಾತಾವರಣದಲ್ಲಿ ಕಲಿಯುತ್ತಿದ್ದಾರೆಂಬುದುಕ್ಕೆ ಕನ್ನಡಿ ಹಿಡಿದಂತಿದೆ.

ಬೆಂಗಳೂರು (ಡಿ.22): ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಅದು ರಾಜ್ಯ ರಾಜಧಾನಿಯಲ್ಲೇ ನಡೆದಿರುವುದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಯಾವ ಎಂಥ ವಾತಾವರಣದಲ್ಲಿ ಕಲಿಯುತ್ತಿದ್ದಾರೆಂಬುದುಕ್ಕೆ ಕನ್ನಡಿ ಹಿಡಿದಂತಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿ ಅಮಾನವೀಯ ಕೃತ್ಯ ನಡೆಸಿರುವ ಶಿಕ್ಷಕರು. ಯಶವಂತಪುರ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವ ಕೃತ್ಯ. ಶಾಲಾ ಮಕ್ಕಳ ಕೈಯಿಂದಲೇ ಶೌಚಾಲಯ ಕ್ಲೀನ್ ಮಾಡಿಸಿಕೊಂಡ ಶಿಕ್ಷಕರು. ವಿದ್ಯಾಭ್ಯಾಸಕ್ಕೆ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವುದು ಹೇಯ ಕೃತ್ಯವಾಗಿದೆ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿ ವಿರುದ್ಧ ಕಿಡಿಕಾರಿದರು. 

ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ‌ ಕ್ಲೀನ್ ಮಾಡಿಸಿದ ಪ್ರಕರಣ; ಕೇಸ್ ಮುಚ್ಚಿಹಾಕಲು ಯತ್ನ: ಸಂಸದ ನಾರಾಯಣಸ್ವಾಮಿ ಆರೋಪ

ಹಿಂದಿನಿಂದಲೂ ಈ ಶಾಲೆಯ ಶಿಕ್ಷಕರು ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರು ಬೆಳಗ್ಗೆಯಿಂದಲೇ ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಶಾಲಾ ಶಿಕ್ಷಕರು ಎಂದಿನಂತೆ ಶಾಲೆಗೆ ತಡವಾಗಿ ಬಂದು ಪೋಷಕರು ಕೆಂಗಣ್ಣಿಗೆ ಗುರಿಯಾದರು.

ಇತ್ತೀಚೆಗೆ ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಕೃತ್ಯ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಅಲ್ಲದೇ ವಸತಿ ಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ತೆಗೆದ ವಿಚಾರವೂ ಬಯಲಿಗೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಇಂಥ ಕೃತ್ಯ ನಡೆದಿರುವುದು ಪೋಷಕರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಒಂದು ಕಡೆ ಶಿಕ್ಷಕರ ನೇಮಕಾತಿ ಆಗಿಲ್ಲ. ಸಾಕಷ್ಟು ಸಿಬ್ಬಂದಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದಕ್ಕೆ ಕೊನೆಯೇ ಇಲ್ಲದಂತಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಬಾಲಕಿ ಬಟ್ಟೆ ಬದಲಾಯಿಸುವ ವಿಡಿಯೋ ರೆಕಾರ್ಡ್ ಮಾಡಿದ ದುರುಳರು! 

ಈ ಶಾಲೆಯಲ್ಲಿ ಒಟ್ಟು 600 ಜನ ಮಕ್ಕಳು ಕಲಿಯುತ್ತಿದ್ದಾರೆ. ದಿನನಿತ್ಯ ಮಕ್ಕಳೇ ಶೌಚಾಲಯ ಕ್ಲೀನ್ ಮಾಡಬೇಕು. ಮಕ್ಕಳೇ ಶಿಕ್ಷಕರು ಊಟ ಮಾಡುವ ತಟ್ಟೆ ತೊಳೆಯಬೇಕು, ಈ ಹಿಂದೆಯೂ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಲಾಗಿತ್ತು. ಈ ಬಗ್ಗೆ ಪೋಷಕರು ದೂರು ಕೂಡಾ ನೀಡಿದ್ರು. ಆದರೂ ಯಾವುದೇ ಕ್ರಮ ಜರುಗಿಸಿಲ್ಲ. ಇದೀಗ ವಿಡಿಯೋ ಸಮೇತ ಸಾಕ್ಷಿ ಸಿಕ್ಕಿದೆ. ಶಾಲಾ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಬಿಗಿಪಟ್ಟು. ಶಾಲೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪೋಷಕರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌