ಅಖಿಲೇಶ್‌ ವಿರುದ್ಧ ಸಂಸದ ತೇಜಸ್ಚಿ ಸೂಯ್ ಕಿಡಿ

Kannadaprabha News   | Asianet News
Published : Jan 06, 2021, 10:15 AM IST
ಅಖಿಲೇಶ್‌ ವಿರುದ್ಧ ಸಂಸದ ತೇಜಸ್ಚಿ ಸೂಯ್ ಕಿಡಿ

ಸಾರಾಂಶ

ಸಾರ್ವ​ಜ​ನಿ​ಕ​ರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಬೇಜವಾ​ಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ | ಅಖಿಲೇಶ್‌ ಯಾದವ್‌ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು(ಜ.06): ಕೋವಿಡ್‌ ಲಸಿಕೆಗೆ ಬಿಜೆಪಿ ಲಸಿಕೆ ಎಂದು ಬೇಜವಾ​ಬ್ದಾರಿ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್‌ ಲಸಿಕೆ ವಿತರಣೆ ಕುರಿತ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಂಗಳವಾರ ಪೂರ್ವ ಸಿದ್ಧತೆ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಲಸಿಕೆ ಬರು​ವು​ದ​ರಿಂದ ಲಕ್ಷಾಂತರ ಜನರ ಜೀವ ಉಳಿ​ಯ​ಲಿದೆ. ಹಲವು ಹಂತದ ಸಂಶೋ​ಧ​ನೆ​ಗಳ ನಂತ​ರ​ವಷ್ಟೇ ಲಸಿಕೆ ಮಾರು​ಕ​ಟ್ಟೆಗೆ ಮುಕ್ತ​ವಾ​ಗ​ಲಿದೆ.

ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದ ಸಂಸದ ತೇಜಸ್ವಿ ಸೂರ್ಯ

ಆದರೆ, ಕೋವಿಡ್‌ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಹೇಳು​ವುದು ಹಾಗೂ ಲಸಿಕೆಯ ಬಗ್ಗೆ ಸಾರ್ವ​ಜ​ನಿ​ಕ​ರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಬೇಜವಾ​ಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ. ಉತ್ತರ ಪ್ರದೇ​ಶ ರಾಜ​ಕಾ​ರ​ಣಿ ಅಖಿಲೇಶ್‌ ಯಾದವ್‌ ಸೇರಿದಂತೆ ಮತ್ತಿತರರು ಈ ರೀತಿ ಮಾತನಾಡಿದ್ದಾರೆ. ಆದರೆ, ಈ ವಿಚಾರದಲ್ಲಿ ರಾಜ್ಯದ ಯಾವ ಪಕ್ಷದ ನಾಯಕರು ಹಗು​ರ​ವಾಗಿ ಮಾತ​ನಾ​ಡಿಲ್ಲ ಎಂದರು.

ಲಸಿಕೆ ತೆಗೆದು​ಕೊ​ಳ್ಳು​ವು​ದ​ರಿಂದ ನಿಶಕ್ತಿ ಉಂಟಾಗಲಿದೆ, ಮಕ್ಕಳಾಗುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ, ಲಸಿಕೆಯಿಂದ ಯಾವುದೇ ಸಮಸ್ಯೆ ಆಗು​ವು​ದಿಲ್ಲ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ