ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದ ಸಂಸದ ತೇಜಸ್ವಿ ಸೂರ್ಯ

Suvarna News   | Asianet News
Published : Jan 02, 2021, 11:59 AM IST
ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದ ಸಂಸದ ತೇಜಸ್ವಿ ಸೂರ್ಯ

ಸಾರಾಂಶ

ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದ ಸಂಸದ | 2021 ಜನರಿಗೆ ಲಸಿಕೆ ತಲುಪಿಸುವ ಸವಾಲು

ಬೆಂಗಳೂರು(ಜ.02): 2020 ಕೊರೋನಾದ ಸವಾಲು ಆಗಿತ್ತು. 2021 ಜನರಿಗೆ ಲಸಿಕೆ ತಲುಪಿಸುವುದು ಸವಾಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ವಿದ್ಯಾಪೀಠ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ, ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಲಸಿಕೆ ತಾಲೀಮಿನ ಬಗ್ಗೆ ಆರೋಗ್ಯಾಧಿಕಾರಿಗಳಿಂದ ತೇಜಸ್ವಿ ಸೂರ್ಯ ಅವರು ವಿವರಣೆ ಪಡೆದಿದ್ದಾರೆ. ಕೋವಿಡ್ ವ್ಯಾಕ್ಸಿನ್ ಗೆ ಅನುಮತಿ ನೀಡಲಾಗಿದೆ. ದೇಶದ ಎಲ್ಲಾ ಕಡೆಗಳಲ್ಲಿ ಹೆಲ್ತ್ ಕೇರ್ ವರ್ಕರ್ಸ್ ಗೆ ವ್ಯಾಕ್ಸಿನ್ ಕೊಡಲು ನಿರ್ಧಾರ ಆಗಿದೆ ಎಂದಿದ್ದಾರೆ.

ಹೇಗೆ ನಡೀತಿದೆ ಕೊರೋನಾ ಲಸಿಕೆ ಡ್ರೈ ರನ್..? ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದಿಷ್ಟು

ಬಹಳ ಸುಲಲಿತವಾಗಿ ವ್ಯಾಕ್ಸಿನ್ ತಲುಪುವ ರೀತಿಯಲ್ಲಿ ಡ್ರೈ ರನ್ ಆಗ್ತಿದೆ ಎಂದು ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ 1.65 ಲಕ್ಷ ಹೆಲ್ತ್ ಕೇರ್ ವರ್ಕರ್ಸ್ ನೋಂದಣಿ ಮಾಡಿಕೊಂಡಿದ್ದಾರೆ. ಇಂದು ವಿದ್ಯಾಪೀಠದಲ್ಲಿ ಡ್ರೈ ರನ್ ಶುರುವಾಗಿದೆ ಎಂದಿದ್ದಾರೆ.

ಅವ್ರಿಗೆ ವ್ಯಾಕ್ಸಿನೇಟರ್ಸ್‌ಗಳ ಐಡೆಂಟಿಫಿಕೇಷನ್ ಆಗಿದೆ. ಪ್ರೈಮರಿ ಹೆಲ್ತ್ ಸೆಂಟರ್‌ಗಳ ಮೂಲಕ ವ್ಯಾಕ್ಸಿನ್ ತಲುಪಲಿದೆ. ಬಿಬಿಎಂಪಿ ಅಧಿಕಾರಿಗಳು ಯಶಸ್ವಿಯಾಗಿ ಡ್ರೈ ರನ್ ಮಾಡಿದ್ದಾರೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!