ಹೊಸ ರಸ್ತೆ ಅಗೆದ ಟೆಲಿಕಾಂ ಕಂಪನಿ: ವ್ಯಕ್ತಿಯೊಬ್ಬ ಗುಂಡಿಯಲ್ಲೇ ಕುಳಿತು ಪ್ರತಿಭಟನೆ

Published : Feb 28, 2023, 08:19 PM IST
ಹೊಸ ರಸ್ತೆ ಅಗೆದ ಟೆಲಿಕಾಂ ಕಂಪನಿ: ವ್ಯಕ್ತಿಯೊಬ್ಬ ಗುಂಡಿಯಲ್ಲೇ ಕುಳಿತು ಪ್ರತಿಭಟನೆ

ಸಾರಾಂಶ

ಖಾಸಗಿ ಟೆಲಿಕಾಂ ಸಂಸ್ಥೆ ಬೇಕಾಬಿಟ್ಟಿರಸ್ತೆ ಅಗೆದಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ದಿನವಿಡೀ ಗುಂಡಿಯಲ್ಲಿ ಕುಳಿತು ಉಪವಾಸ ಕೈಗೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹನುಮಂತ ನಗರದಲ್ಲಿ ನಡೆದಿದೆ.

ಬೆಂಗಳೂರು (ಮಾ.1) : ಖಾಸಗಿ ಟೆಲಿಕಾಂ ಸಂಸ್ಥೆ ಬೇಕಾಬಿಟ್ಟಿರಸ್ತೆ ಅಗೆದಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ದಿನವಿಡೀ ಗುಂಡಿಯಲ್ಲಿ ಕುಳಿತು ಉಪವಾಸ ಕೈಗೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹನುಮಂತ ನಗರದಲ್ಲಿ ನಡೆದಿದೆ.

ಎರಡು ತಿಂಗಳ ಹಿಂದೆ ಬಿಬಿಎಂಪಿ(BBMP)ಯಿಂದ ಹನುಮಂತ ನಗರದ 4ನೇ ಅಡ್ಡ ರಸ್ತೆಯನ್ನು ಡಾಂಬರೀಕರಣ(Asphaltization) ಮಾಡಲಾಗಿತ್ತು. ಅನುಮತಿ ಪಡೆಯದೆ ಖಾಸಗಿ ಕಂಪನಿಯು ಈ ರಸ್ತೆಯಲ್ಲಿ ಸುಮಾರು 700 ಮೀಟರ್‌ ಉದ್ದ ರಸ್ತೆ ಅಗೆದಿತ್ತು. ಇದರಿಂದ ಪಾದಚಾರಿಗಳು ಸೇರಿದಂತೆ ವಾಹನ ಸವಾರರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆಯನ್ನು ಪದೇ ಪದೇ ಅಗೆಯುವುದರಿಂದ ಬೇಸತ್ತು ಸ್ಥಳೀಯ ನಿವಾಸಿ ಜಿ.ಆರ್‌.ಅನಿಲ್‌ಕುಮಾರ್‌(GR Anil kumar) ಅವರು ಕಳೆದ ಭಾನುವಾರ ಇಡೀ ದಿನ ಗುಂಡಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಕರ್ತವ್ಯನಿರತ ಟ್ರಾಫಿಕ್‌ ಎಎಸ್‌ಐಗೆ ಆಟೋ ಡಿಕ್ಕಿ: ಮೆದುಳು ನಿಷ್ಟ್ರಿಯಗೊಂಡು ಸಾವು

ಬೆಳಗ್ಗೆ 9ರಿಂದ ಗುಂಡಿಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿದ ಅನಿಲ್‌ ಕುಮಾರ್‌ ಅವರು, ಅನಧಿಕೃತವಾಗಿ ರಸ್ತೆ ಗುಂಡಿ ಅಗೆದ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಬಿಬಿಎಂಪಿ ಅಧಿಕಾರಿಗಳು ಹನುಮಂತ ನಗರ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಗೆದ ಕಂಪನಿ ವಿರುದ್ಧ ದೂರು ದಾಖಲಿಸಿದ ನಂತರ ಸಂಜೆ 7ಕ್ಕೆ ಪ್ರತಿಭಟನೆ ಅಂತ್ಯಗೊಳಿಸಿದರು.

ಗುಂಡಿ ಮುಚ್ಚಿ ₹25 ಲಕ್ಷ ದಂಡ :

ಬಿಬಿಎಂಪಿ ಅಧಿಕಾರಿಗಳು ಖಾಸಗಿ ಸಂಸ್ಥೆ ಅಗೆದ ಗುಂಡಿಯನ್ನು ಮುಚ್ಚುವ ಕೆಲಸ ಮಾಡಿದರು. ಅನಧಿಕೃತವಾಗಿ ರಸ್ತೆ ಅಗೆದಿರುವುದರಿಂದ .70 ಸಾವಿರ ಮೌಲ್ಯದ ಸಾರ್ವಜನಿಕ ಸ್ವತ್ತಿಗೆ ಹಾನಿ ಆಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗೆ .25 ಲಕ್ಷ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿಯ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಿದ್ಯಾ ತಿಳಿಸಿದ್ದಾರೆ.
ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದರೂ ಏಕಕಾಲಕ್ಕೆ ಜಾರಿ: ಹೈಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!