ಮಳೆ: ರಾಜ್ಯದ ಬಹುತೇಕ ಕಡೆ ತಾಪಮಾನ ಕುಸಿತ

Published : May 15, 2024, 04:26 AM IST
ಮಳೆ: ರಾಜ್ಯದ ಬಹುತೇಕ ಕಡೆ ತಾಪಮಾನ ಕುಸಿತ

ಸಾರಾಂಶ

ರಾಜ್ಯದಲ್ಲಿ ಕನಿಷ್ಠ ಇನ್ನೂ ಒಂದು ವಾರ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಐದು ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು(ಮೇ.15): ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ರಾಯಚೂರು, ವಿಜಯಪುರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದೆ. ಸುಳಿಗಾಳಿಯಿಂದ ರಾಜ್ಯಾದ್ಯಂತ ಮಳೆಯಾಗುತ್ತಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಕಡಿಮೆಯಾಗಿದೆ. ಹವಾಮಾನ ಇಲಾಖೆಯ ಮಂಗಳವಾರ ಬೆಳಗ್ಗೆ 8.30ರವರೆಗಿನ ಮಾಹಿತಿ ಪ್ರಕಾರ ರಾಯಚೂರಿನಲ್ಲಿ (33.6 ಡಿಗ್ರಿ ದಾಖಲು) ವಾಡಿಕೆ ಪ್ರಮಾಣಕ್ಕಿಂತ 7.1 ಡಿಗ್ರಿ ಸೆಲ್ಶಿಯಸ್‌ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ (30.4) ವಾಡಿಕೆಗಿಂತ 2.9, ಬೀದರ್‌ನಲ್ಲಿ (34.6) 4.8, ವಿಜಯಪುರದಲ್ಲಿ (37.4) 2, ಗದಗ (34.7) 2.1, ಕಲಬುರಗಿ (37.9) 3.2, ಕೊಪ್ಪಳ (33.7) 4.4, ಚಿಕ್ಕಮಗಳೂರು (27.4) 4.2, ಚಿತ್ರದುರ್ಗ (32.6) 2.6, ದಾವಣಗೆರೆ (34.5) ಹಾಗೂ ಮಂಡ್ಯದಲ್ಲಿ (32.6) ತಲಾ 1.6, ಶಿವಮೊಗ್ಗ (33.8) 1.9 ಡಿಗ್ರಿ ಸೆಲ್ಶಿಯಸ್‌ನಷ್ಟು ಕಡಿಮೆ ದಾಖಲಾಗಿದೆ.

ನಿರಂತರ ಮಳೆಗೆ ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು: ವಾಹನ ಸವಾರರ ಪರದಾಟ

ಮೈಸೂರು, ಬೆಳಗಾವಿ ಹಾಗೂ ಹಾಸನದಲ್ಲಿ ಬಿಸಿಲ ತಾಪ ಮುಂದುವರೆದಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 37.2 ದಾಖಲಾಗಿದ್ದು, ವಾಡಿಕೆ ಪ್ರಮಾಣಕ್ಕಿಂತ 3.6 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಿದೆ. ಇನ್ನು ಬೆಳಗಾವಿಯಲ್ಲಿ (37.2) 2.1, ಹಾಸನದಲ್ಲಿ (36) 3.8 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗಿರುವುದು ಕಂಡು ಬಂದಿದೆ. ಇನ್ನೂ ಐದು ದಿನ 2 ರಿಂದ 4 ಡಿಗ್ರಿ ಸೆಲ್ಶಿಯಸ್‌ವರೆಗೆ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಒಂದು ವಾರ ಭಾರೀ ಮಳೆ?

ರಾಜ್ಯದಲ್ಲಿ ಕನಿಷ್ಠ ಇನ್ನೂ ಒಂದು ವಾರ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಐದು ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಮಳೆಯಿಂದಾಗಿ ಗಾಳಿ ಪ್ರಮಾಣವೂ ಹೆಚ್ಚಾಗಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ಮಂಗಳವಾರ ಬೆಳಗ್ಗೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆ ಅವಧಿಯಲ್ಲಿ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು 16 ಸೆಂ.ಮೀ ಮಳೆಯಾಗಿದೆ. ಮಂಡ್ಯದಲ್ಲಿ 9, ನಿಪ್ಪಾಣಿ 6, ನಂಜನಗೂಡು, ಚನ್ನಪಟ್ಟಣ, ರಾಮನಗರ, ಬೆಂಗಳೂರಿನ ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಚಿಕ್ಕಮಗಳೂರಿನ ಯಗಟಿಯಲ್ಲಿ ತಲಾ 4, ಎಚ್‌ಎಎಲ್‌ ವಿಮಾನ ನಿಲ್ದಾಣ, ತೊಂಡೆಭಾವಿ, ಹುಣಸೂರು, ಅಜ್ಜಂಪುರ, ಬೆಂಗಳೂರು ನಗರದಲ್ಲಿ ತಲಾ 3, ಸಕಲೇಶಪುರ, ಬೇಗೂರು, ಚಿಕ್ಕಬಳ್ಳಾಪುರ, ಕೆ.ಆರ್‌.ನಗರ, ಹಾರಂಗಿ, ಮೈಸೂರು, ಕುಣಿಗಲ್‌ನಲ್ಲಿ ತಲಾ 2, ಕಡೂರು, ಮಳವಳ್ಳಿ, ಮಧುಗಿರಿ ಹಾಗೂ ಶ್ರವಣಬೆಳಗೊಳದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!