ಕರ್ನಾಟಕದಲ್ಲಿ ಬಿಸಿಲಿನ ತಾಪ ಮತ್ತಷ್ಟು ಏರಿಕೆ ಸಾಧ್ಯತೆ..!

Published : Apr 12, 2023, 09:22 AM ISTUpdated : Apr 12, 2023, 11:07 AM IST
ಕರ್ನಾಟಕದಲ್ಲಿ ಬಿಸಿಲಿನ ತಾಪ ಮತ್ತಷ್ಟು ಏರಿಕೆ ಸಾಧ್ಯತೆ..!

ಸಾರಾಂಶ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಸೆಲ್ಸಿಯಸ್‌ ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು(ಏ.12):  ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಸೆಲ್ಸಿಯಸ್‌ ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಭಾರತ ಹೊರತುಪಡಿಸಿ ಉಳಿದೆಡೆ ಈ ವರ್ಷ ಭಾರೀ ಬಿಸಿಲು

ಕಲಬುರಗಿಯಲ್ಲಿ 40.1 ಡಿಗ್ರಿ:

ಕಳೆದ ವಾರದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ದಾಖಲಾಗಿತ್ತು. ಮತ್ತೆ ಮಳೆ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ ಇಳಿಕೆ ಆಗಿತ್ತು. ಸೋಮವಾರ 40.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.
ಮುಂದಿನ ಒಂದೆರಡು ದಿನ ಹಾಸನ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!