
ಬೆಂಗಳೂರು(ಮಾ.19): ಒಂದೆಡೆ ಕೊರೋನಾ ವೈರಸ್ ಬಿಸಿ ಏರುತ್ತಿದ್ದರೆ ಇನ್ನೊಂದೆಡೆ ತಾಪಮಾನವೂ ಅಪಾಯದ ಮಟ್ಟಕ್ಕೇರಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಾರ್ಚ್ ಕೊನೆಯ ವಾರದಲ್ಲಿ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ. ಒಂದು ವೇಳೆ ಮಳೆ ಬಂದರೆ ಮಾತ್ರ ಉಷ್ಣಾಂಶ ಕಡಿಮೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
2-3 ದಿನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ:
ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಗಾಳಿಯ ಒತ್ತಡ ಕಡಿಮೆ ಆಗಿರುವುದರಿಂದ ತೆಲಂಗಾಣ ಭಾಗದಲ್ಲಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮುಂದಿನ ಎರಡು, ಮೂರು ದಿನ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಂಗಳವಾರ ಮತ್ತು ಬುಧವಾರ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಕೊರೋನಾ ಭಯ ಬೇಡ: ಯಾವುದಕ್ಕೂ ಈ ವಸ್ತುಗಳ ಸ್ಟಾಕ್ ಇರಲಿ.
ಮಾ.19 ಮತ್ತು 20ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಾ.20 ಮತ್ತು 21ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಿರುವ ಹವಾಮಾನ ಇಲಾಖೆ ಅಂಕಿ ಅಂಶದ ಪ್ರಕಾರ ಕಲಬುರಗಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಡ್ಯದಲ್ಲಿ ಅತಿ ಕಡಿಮೆ 18.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ