ಉತ್ತರ ಕರ್ನಾಟಕದಲ್ಲಿ 41 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ! ಈ ಮೂರು ಜಿಲ್ಲೆಗಳಲ್ಲಿ ಬೆಂಕಿ ಉಗುಳುವ ಬಿಸಿಲು!

Published : May 04, 2025, 11:15 AM IST
ಉತ್ತರ ಕರ್ನಾಟಕದಲ್ಲಿ 41 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ! ಈ ಮೂರು ಜಿಲ್ಲೆಗಳಲ್ಲಿ ಬೆಂಕಿ ಉಗುಳುವ ಬಿಸಿಲು!

ಸಾರಾಂಶ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬಿಸಿಲ ಬಿಸಿ ಹೆಚ್ಚಾಗಿದೆ. ಪ್ರಮುಖವಾಗಿ ಕಲಬುರಗಿ, ಬೀದರ್‌ ಹಾಗೂ ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣ 41 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿ ವರದಿಯಾಗಿದೆ.

ಬೆಂಗಳೂರು (ಮೇ.4) (ಮೇ.4): ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬಿಸಿಲ ಬಿಸಿ ಹೆಚ್ಚಾಗಿದೆ. ಪ್ರಮುಖವಾಗಿ ಕಲಬುರಗಿ, ಬೀದರ್‌ ಹಾಗೂ ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣ 41 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿ ವರದಿಯಾಗಿದೆ.

 ಕಲಬುರಗಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ ಸಾಮಾನ್ಯವಾಗಿದ್ದರೆ, ಬೀದರ್‌ ಹಾಗೂ ವಿಜಯಪುರದಲ್ಲಿ ವಾಡಿಕೆ ಪ್ರಮಾಣಕ್ಕಿಂತ 1.8 ಡಿ.ಸೆ ಹೆಚ್ಚಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 37.2 ಡಿ.ಸೆ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 2.4 ಹೆಚ್ಚಾಗಿದೆ. 

ಇದನ್ನೂ ಓದಿ: 50 ಡಿಗ್ರಿಗೆ ತಲುಪಲಿದೆ ಪಾಕ್‌ನ ತಾಪಮಾನ, ಇದು ಜಗತ್ತಿನಲ್ಲೇ ಹೆಚ್ಚು!

ರಾಯಚೂರಿನಲ್ಲಿ 39, ಹಾಗೂ ಬಾಗಲಕೋಟೆಯಲ್ಲಿ 38.3, ಧಾರಾವಾಡ ಹಾಗೂ ಕೊಪ್ಪಳದಲ್ಲಿ ತಲಾ 38, ಗದಗ 37.9, ಬೆಳಗಾವಿಯಲ್ಲಿ 37, ಹಾವೇರಿಯಲ್ಲಿ 36.8, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ತಲಾ 36, ಬೆಂಗಳೂರು ನಗರದಲ್ಲಿ 33 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!