ದೇಗುಲಗಳನ್ನು ಆರ್‌ಟಿಐನಿಂದ ಹೊರಗಿಡಲಾಗದು: ಹೈಕೋರ್ಟ್

Published : Jun 13, 2024, 10:50 AM IST
ದೇಗುಲಗಳನ್ನು ಆರ್‌ಟಿಐನಿಂದ ಹೊರಗಿಡಲಾಗದು: ಹೈಕೋರ್ಟ್

ಸಾರಾಂಶ

ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ರಾಜ್ಯ ಧಾರ್ಮಿಕದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಗೆ ಬರುವ ಸಾರ್ವಜನಿಕ ಪ್ರಾಧಿಕಾರಗಳಾಗಿವೆ. ಆದ್ದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದ ನ್ಯಾಯಪೀಠ ಅರ್ಜಿ 

ಬೆಂಗಳೂರು(ಜೂ.13):  ರಾಜ್ಯದಲ್ಲಿ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ. 

ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆಗೆ ಹೈಕೋರ್ಟ್‌ ಅಸ್ತು

ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ರಾಜ್ಯ ಧಾರ್ಮಿಕದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಗೆ ಬರುವ ಸಾರ್ವಜನಿಕ ಪ್ರಾಧಿಕಾರಗಳಾಗಿವೆ. ಆದ್ದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಲೆಕ್ಷನ್‌: ಬಿಜೆಪಿ-ದಳ ಮೈತ್ರಿಗೆ ಜಯ
ಮಹಾರಾಷ್ಟ್ರ ತಂಡಗಳಿಂದ ರಾಜ್ಯದಲ್ಲಿ ಡ್ರಗ್ಸ್‌ಪತ್ತೆ ನಮ್ಮ ಪೊಲೀಸ್‌ ವೈಫಲ್ಯ : ಸಿದ್ದು ಗರಂ