ಮೆಜೆಸ್ಟಿಕ್‌ನ ಬಸ್‌, ರೈಲ್ವೆ ನಿಲ್ದಾಣ ಜನಸಂದಣಿ ಹೆಚ್ಚಿರುವ ಕಡೆ ಸ್ಫೋಟಕ್ಕೆ ಉಗ್ರರು ಸಂಚು?

Published : Jul 20, 2023, 05:12 AM ISTUpdated : Jul 20, 2023, 11:24 AM IST
ಮೆಜೆಸ್ಟಿಕ್‌ನ ಬಸ್‌, ರೈಲ್ವೆ ನಿಲ್ದಾಣ ಜನಸಂದಣಿ ಹೆಚ್ಚಿರುವ ಕಡೆ ಸ್ಫೋಟಕ್ಕೆ ಉಗ್ರರು ಸಂಚು?

ಸಾರಾಂಶ

ಬಂಧಿತ ಐವರು ಶಂಕಿತ ಎಲ್‌ಐಟಿ ಉಗ್ರರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳು, ಮೆಜೆಸ್ಟಿಕ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳನ್ನೇ ಗುರಿಯಾಗಿಸಿ ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದರು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು (ಜು.20) :  ಬಂಧಿತ ಐವರು ಶಂಕಿತ ಎಲ್‌ಐಟಿ ಉಗ್ರರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳು, ಮೆಜೆಸ್ಟಿಕ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳನ್ನೇ ಗುರಿಯಾಗಿಸಿ ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದರು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ.

ನಗರದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಆರೋಪಿಗಳು ಗುರುತಿಸಿದ್ದ ಸ್ಥಳಗಳ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ನಡೆದಿದ್ದು, ಬಂಧಿತರ ವಿಚಾರಣೆ ಬಳಿಕ ಸ್ಪಷ್ಟವಾದ ಚಿತ್ರಣ ಸಿಗಲಿದೆ ಎಂದು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ತಿಳಿಸಿದ್ದಾರೆ.

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜು: ಶಂಕಿತ ಉಗ್ರರಿಗೆ ಆನ್‌ಲೈನಲ್ಲಿ ಹಣ, ಹೊರ ರಾಜ್ಯದಿಂದ ಶಸ್ತ್ರಾಸ್ತ್ರ

ಬಿಎಂಟಿಸಿ ಬಸ್‌ಗಳು, ಮೆಜೆಸ್ಟಿಕ್‌, ಪ್ರಮುಖ ಮಾಲ್‌ಗಳು, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಗಳು ಹಾಗೂ ಎಂ.ಜಿ. ರಸ್ತೆ ಸೇರಿದಂತೆ ನಗರದ ಹೆಚ್ಚು ಜನ ಸೇರುವ ಸ್ಥಳಗಳ ಬಗ್ಗೆ ಆರೋಪಿಗಳು ಮಾಹಿತಿ ಕಲೆ ಹಾಕಿ ಭಯೋತ್ಪಾದಕ ಕೃತ್ಯಕ್ಕೆ ರೂಪರೇಷೆ ರೂಪಿಸಿದ್ದರು. ಇದಕ್ಕಾಗಿ ಸುಲ್ತಾನ್‌ ಪಾಳ್ಯದಲ್ಲಿರುವ ಶಂಕಿತ ಉಗ್ರ ಸುಹೇಲ್‌ ಮನೆಯಲ್ಲೇ ಪಿಸ್ತೂಲ್‌ಗಳು ಹಾಗೂ ಗುಂಡುಗಳನ್ನು ಶಂಕಿತ ಉಗ್ರರು ಸಂಗ್ರಹಿಸಿಟ್ಟಿದ್ದರು. ಹಾಗೆಯೇ ಆತನ ಮನೆಯಲ್ಲೇ ರಾತ್ರಿ ವೇಳೆ ಸಭೆ ನಡೆಸಿ ಜುನೈದ್‌ ಸೂಚನೆ ಮೇರೆಗೆ ದಾಳಿ ನಡೆಸಲು ಶಂಕಿತರು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ.

ಕುರಿ ವ್ಯಾಪಾರಿಯೀಗ ಮೋಸ್ಟ್‌ ವಾಂಟೆಡ್‌ ಉಗ್ರ: ಬೆಂಗ್ಳೂರಲ್ಲಿ ಬಂಧಿತ ಉಗ್ರರಿಗೆ ಇವನೇ ಗುರು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!