Chikkaballapur: ಅರಣ್ಯರಕ್ಷಕರಿನ್ನು ಗಸ್ತು ಅರಣ್ಯ ಪಾಲಕರು!

Published : Dec 05, 2022, 10:52 AM ISTUpdated : Dec 05, 2022, 10:53 AM IST
Chikkaballapur: ಅರಣ್ಯರಕ್ಷಕರಿನ್ನು ಗಸ್ತು ಅರಣ್ಯ ಪಾಲಕರು!

ಸಾರಾಂಶ

ಅರಣ್ಯರಕ್ಷಕರಿನ್ನು ಗಸ್ತು ಅರಣ್ಯ ಪಾಲಕರು  ‘ಅರಣ್ಯ ರಕ್ಷಕ’ ಹುದ್ದೆಯನ್ನು ‘ಗಸ್ತು ಅರಣ್ಯ ಪಾಲಕರು’ ಎಂದು ಬದಲಿಸಿದ ಸರ್ಕಾರ  ಅರಣ್ಯ, ಜೀವ ಪರಿಸ್ಥಿತಿ, ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಆದೇಶ ರಾಜ್ಯದಲ್ಲಿ ಗಸ್ತು ಅರಣ್ಯ ಪಾಲಕರ ತೀವ್ರ ಕೊರತೆ

ಕಾಗತಿ ನಾಗರಾಜಪ್ಪ

 ಚಿಕ್ಕಬಳ್ಳಾಪುರ (ಡಿ.5) : ರಾಜ್ಯದ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಅರಣ್ಯ ರಕ್ಷಕ’ ಹುದ್ದೆಯ ಪದನಾಮವನ್ನು ‘ಗಸ್ತು ಅರಣ್ಯ ಪಾಲಕರು’ ಎಂದು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ.

ಅರಣ್ಯ ರಕ್ಷಕ ಪದನಾಮವನ್ನು ಗಸ್ತು ಅರಣ್ಯ ಅಧಿಕಾರಿ ಎಂದು ಬದಲಾವಣೆ ಮಾಡಲು ಇರುವ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿ, ವರದಿ ನೀಡಲು ರಾಜ್ಯ ಸರ್ಕಾರ ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ದಿ) ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಸಮಿತಿ ಮೂರು ಬಾರಿ ಸಭೆ ನಡೆಸಿ, ರಾಜ್ಯ ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿತ್ತು. ಸಮಿತಿ ಸಲ್ಲಿಸಿದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿದೆ. ಅಲ್ಲದೆ, ಈ ಸಂಬಂಧ ಅರಣ್ಯ ಇಲಾಖೆಯ ನೇಮಕಾತಿ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದೆ.

ಚಿಕ್ಕಮಗಳೂರು: ಅರಣ್ಯ ಇಲಾಖೆ ಕಾರ್ಯಾಚರಣೆ, ಕಾಡಾನೆ ಸೆರೆ

ಈ ಹಿನ್ನೆಲೆಯಲ್ಲಿ ‘ಅರಣ್ಯ ರಕ್ಷಕ’ ಪದನಾಮವನ್ನು ‘ಗಸ್ತು ಅರಣ್ಯ ಪಾಲಕರು’ ಎಂದು ಮರುನಾಮಕರಣಗೊಳಿಸಿ ಸರ್ಕಾರದ ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ ಗೀತಾ ಎಂ.ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ಪದನಾಮವನ್ನಷ್ಟೇ ಬದಲಾವಣೆ ಮಾಡಿದೆ. ಆ ಹುದ್ದೆಯ ವೇತನ ಶ್ರೇಣಿಯಲ್ಲಾಗಲಿ, ನೇಮಕಾತಿ ವಿಧಾನದಲ್ಲಿಯಾಗಲಿ, ಕರ್ತವ್ಯ ಹಾಗೂ ಜವಾಬ್ದಾರಿಗಳಲ್ಲಾಗಲಿ ಯಾವುದೇ ಬದಲಾವಣೆ ಮಾಡಿಲ್ಲ.

ಈ ಮಧ್ಯೆ, ರಾಜ್ಯದಲ್ಲಿ ಹಲವು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸಾಕಷ್ಟುಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ. ಅದರಲ್ಲೂ ಗಸ್ತು ಅರಣ್ಯ ಪಾಲಕರ ತೀವ್ರ ಕೊರತೆಯಿದೆ. ಅರಣ್ಯ ಸಂರಕ್ಷಣೆಯಲ್ಲಿ ಇವರ ಪಾತ್ರ ಮಹತ್ತರವಾದುದು. ಹೀಗಾಗಿ, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ವೇತನ ಹೆಚ್ಚಳ ಸೇರಿದಂತೆ ಇವರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. Dharwad: ಹಣ ಪಡೆದು ಮುಂಬಡ್ತಿ ನೀಡಿದ ಸಿಸಿಎಫ್‌ ವಿರುದ್ಧ ತಿರುಗಿಬಿದ್ದ ಅರಣ್ಯ ರಕ್ಷಕರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ