ಎಚ್‌ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಕೊಲೆಗೆ ಯತ್ನ; ಕೂದಲೆಳೆ ಅಂತರದಲ್ಲಿ ಪಾರು!

Published : Oct 11, 2023, 12:03 AM IST
ಎಚ್‌ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಕೊಲೆಗೆ ಯತ್ನ; ಕೂದಲೆಳೆ ಅಂತರದಲ್ಲಿ ಪಾರು!

ಸಾರಾಂಶ

ಜೆಡಿಎಸ್ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಅಪರಿಚಿತ ವ್ಯಕ್ತಿಗಳು ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹಾಸನ (ಅ.11) : ಜೆಡಿಎಸ್ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಅಪರಿಚಿತ ವ್ಯಕ್ತಿಗಳು ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೂದಲೆಳೆ ಅಂತರದಲ್ಲಿ ಪಾರಾಗಿ ಪ್ರಾಣ ಉಳಿಸಿಕೊಂಡ ಗುತ್ತಿಗೆದಾರ ಅಶ್ವಥ್. ಸಂಜೆ ಹಾಸನದಿಂದ ಎಚ್.ಡಿ.ರೇವಣ್ಣ ಅವರ ಜೊತೆ ಹೊಳೆನರಸೀಪುರದ ಮನೆಗೆ ತೆರಳಿದ್ದ ಅಶ್ವಥ್. ಕೆಲಕಾಲ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿದ್ದರು. ಬಳಿಕ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ KA-53 MF 5555 ನಂಬರ್ ಫಾರ್ಚುನರ್ ಕಾರಿನಲ್ಲಿ ಹೊರಟಿದ್ದರು.

ಖಾಲಿ ಇಂಜೆಕ್ಷನ್‌ ಚುಚ್ಚಿ ಆಸ್ಪತ್ರೆಯಲ್ಲೇ ಬಾಣಂತಿಯ ಸಾಯಿಸಲು ಯತ್ನಿಸಿದ ನಕಲಿ ನರ್ಸ್‌ ಬಂಧನ!

ಅಶ್ವಥ್ ಮನೆಗೆ ಹೊರಟಿರುವ ಬಗ್ಗೆ ಮಾಹಿತಿ ಪಡೆದು ಸೂರನಹಳ್ಳಿ ಹಂಪ್ಸ್ ಬಳಿ ಕಾರಿನ ಮೇಲೆ ಅಟ್ಯಾಕ್ ಮಾಡಿದ ಅಪರಿಚಿತ ವ್ಯಕ್ತಿಗಳು. ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಮುಂದಾದ ಐದಾರು ಮಂದಿ ದುಷ್ಕರ್ಮಿಗಳು. ಕೂಡಲೇ ಕಾರು ರಿವರ್ಸ್ ತೆಗೆದು 150 ಸ್ಪೀಡಲ್ಲಿ  ಕಾರು ಮುಂದೆ ಓಡಿಸಿಕೊಂಡು ಹೋಗಿ ಎಸ್ಕೇಪ್ ಆದ ಅಶ್ವಥ್. ಅಷ್ಟಕ್ಕೆ ಬಿಡದೆ ದುಷ್ಕರ್ಮಿಗಳು ಮೂಡಲಹಿಪ್ಪೆ ಗ್ರಾಮದವರೆಗೂ ಅಶ್ವಥ್ ಅವರನ್ನು ಹಿಂಬಾಲಿಸಿದ್ದಾರೆ.

ಜೆಡಿಎಸ್‌ ಕಾರ್ಯಕರ್ತನ ಬರ್ಬರ ಕೊಲೆ: ಎಚ್.ಡಿ ರೇವಣ್ಣ ಆಪ್ತನ ಕೊಲೆಯ ರಹಸ್ಯ ಇಲ್ಲಿದೆ..

ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಅಶ್ವಥ್. ಘಟನೆ ಮಾಹಿತಿ ತಿಳಿದು ಚನ್ನರಾಯಪಟ್ಟಣಕ್ಕೆ ತೆರಳಿದ ಮಾಜಿ ಸಚಿವ ಎಚ್.ಡಿ.ರೇವಣ್ಣ‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!