
ಸಿಂದಗಿ (ಅ.30): ವಿಜಯಪುರ ಜಿಲ್ಲೆ ಸಿಂದಗಿಯ ವಿರಕ್ತಮಠದ 1.20 ಎಕರೆ ಭೂಮಿ ಕೂಡ ವಕ್ಫ್ ಬೋರ್ಡ್ ಆಸ್ತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಿರಕ್ತಮಠದ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಸೇರ್ಪಡೆಯಾಗಿರುವುದು ಶ್ರೀಗಳು ಮತ್ತು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ವಿರಕ್ತಮಠದ ಸರ್ವೇ ನಂಬರ್ 1020ರ ಪಹಣಿಯಲ್ಲಿ ವಕ್ಫ ಬೋರ್ಡ್ ಹೆಸರು ಸೇರ್ಪಡೆಯಾಗಿದೆ. 2018-19ರಲ್ಲಿಯೇ ಪಹಣಿಯ ಕಾಲಂ 11ರಲ್ಲಿ ‘ಸಿಂದಗಿ ಸುನ್ನಿ ವಕ್ಫ್ ಆಸ್ತಿ’ ಎಂದು ಹೆಸರು ಸೇರ್ಪಡೆಯಾಗಿದೆ. ಸಾಲಕ್ಕಾಗಿ ಹೊಸ ಉತಾರೆ ತೆಗೆದಾಗ ವಕ್ಫ್ ಹೆಸರು ಸೇರ್ಪಡೆ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೆ, ನೋಟಿಸ್ ನೀಡದೆಯೇ ವಕ್ಫ್ ಹೆಸರು ಸೇರ್ಪಡೆಯಾಗಿದೆ.
ಶ್ರೀಗಳ ಆಕ್ರೋಶ: ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿಂದಗಿ ವಿರಕ್ತಮಠದ ಬಸವಪ್ರಭು ಮಹಾಸ್ವಾಮಿಯವರು, ಬಸವಣ್ಣನವರ ಕಾಲದಿಂದಲೇ ರಾಣಿ ಅಬ್ಬಕ್ಕನಿಂದ ಬಳುವಳಿಯಾಗಿ ಬಂದ ಮಠದ ಆಸ್ತಿಯನ್ನು ನಿನ್ನೆ ಮೊನ್ನೆ ಹುಟ್ಟಿಕೊಂಡ ವಕ್ಫ್ ಬೋರ್ಡ್ ತನ್ನ ಹೆಸರಿಗೆ ಪರಭಾರೆ ಮಾಡಿಕೊಳ್ಳುತ್ತದೆ ಎಂದರೆ ಇದು ಅನ್ಯಾಯದ ಪರಮಾವಧಿ. ಅಲ್ಲದೇ ರೈತರು, ಸಾರ್ವಜನಿಕರು ತಮ್ಮ ಆಸ್ತಿ ಯಾವಾಗ ಯಾರು ಕೊಳ್ಳೆ ಹೊಡೆಯುತ್ತಾರೋ ಎನ್ನುವ ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಇದಕ್ಕೆ ಸರ್ಕಾರವೇ ಮುತುವರ್ಜಿ ವಹಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್: ಅಧ್ಯಯನದಲ್ಲಿ ಬೆಳಕಿಗೆ!
ಶ್ರೀಗಳಿಗೆ ಗೊತ್ತಿಲ್ಲದೆಯೇ ಹೆಸರು ಬದಲು: ಈ ಮಧ್ಯೆ, ಮಂಗಳವಾರ ಮಠಕ್ಕೆ ಭೇಟಿ ನೀಡಿದ್ದ ಬಿಜೆಪಿ ಸಂಸದ ಗೋವಿಂದ ಕಾರಜೋಳ, ಈ ಕುರಿತು ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, 2019ರ ಜನವರಿಯಲ್ಲಿಯೇ ಮಠದ ಆಸ್ತಿ ಬದಲಾವಣೆ ಮಾಡಿದ್ದಾರೆ. ಆದರೆ, ಶ್ರೀಗಳಿಗೆ ಗೊತ್ತಿಲ್ಲ. ಆಸ್ತಿ ಸರ್ವೇ ನಂ.1020ರಲ್ಲಿ 1.36 ಎಕರೆ ಉತಾರಿಯಲ್ಲಿ ದಾಖಲು ತೋರಿಸಿದ್ದಾರೆ. ಹೀಗಾಗಿ, ಜಿಲ್ಲಾ ಸಚಿವರು ಮೌಖಿಕವಾಗಿ ಕ್ರಮ ಕೈಗೊಳ್ಳಿ ಎಂದು ಹೇಳಿದಾಗ ಕ್ರಮ ಕೈಗೊಳ್ಳುವ ನೈತಿಕತೆ ಯಾವ ಅಧಿಕಾರಿಯೂ ಇರುವುದಿಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ