ರಾಜ್ಯ ಸರ್ಕಾರ ಇಷ್ಟು ಬೇಗ ಲಾಕ್‌ಡೌನ್‌ ಸಡಿಲಿಸಿದ್ದೇಕೆ?

Published : Apr 19, 2020, 07:21 AM ISTUpdated : Apr 19, 2020, 06:21 PM IST
ರಾಜ್ಯ ಸರ್ಕಾರ ಇಷ್ಟು ಬೇಗ ಲಾಕ್‌ಡೌನ್‌ ಸಡಿಲಿಸಿದ್ದೇಕೆ?

ಸಾರಾಂಶ

ಇಷ್ಟು ಬೇಗ ಲಾಕ್‌ಡೌನ್‌ ಸಡಿಲಿಕೆ ಏಕೆ?| ಆಘಾತಕ್ಕೆ ತುತ್ತಾಗಿರುವ ಆರ್ಥಿಕತೆಗೆ ಚೇತರಿಕೆ ನೀಡಲು ಯತ್ನ| ಬರಿದಾಗಿರುವ ಸರ್ಕಾರದ ಬೊಕ್ಕಸಕ್ಕೆ ಆದಾಯದ ನಿರೀಕ್ಷೆ

ಬೆಂಗಳೂರು(ಏ.19): ಕೊರೋನಾ ಸೋಂಕು ತಡೆಯುವ ಸಂಬಂಧ ಕಳೆದ 28 ದಿನಗಳಿಂದ ಇಡೀ ರಾಜ್ಯ ಲಾಕ್‌ಡೌನ್‌ ಮಾಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆ ಮೇಲೆ ಪೆಟ್ಟು ಬಿದ್ದಿದ್ದು, ಆರ್ಥಿಕತೆ ಸುಧಾರಣೆಗಾಗಿ ಸೋಮವಾರದಿಂದ ಲಾಕ್‌ಡೌನ್‌ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ತುರ್ತು ಸೇವೆಗಳನ್ನು ಹೊರತು ಪಡಿಸಿ ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಪರಿಣಾಮ ಆರ್ಥಿಕ ಚಟುವಟಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಯಾವುದೇ ಆದಾಯವು ಸರ್ಕಾರದ ಬೊಕ್ಕಸಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಿ ಬೊಕ್ಕಸಕ್ಕೆ ಆದಾಯ ತರುವ ನಿಟ್ಟಿನಲ್ಲಿ ಸೋಮವಾರದಿಂದ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

ಸಿಎಂ ಹೇಳಿಕೆ ವಾಪಸ್: ಲಾಕ್ ಡೌನ್ ಸಡಿಲಿಕೆ ಹಿಂಪಡೆದ ರಾಜ್ಯ ಸರ್ಕಾರ...!

ಅಬಕಾರಿ, ಸಾರಿಗೆ ನೋಂದಣಿ ಸೇರಿದಂತೆ ಸರ್ಕಾರದ ಬೊಕ್ಕಸಕ್ಕೆ ಆದಾಯ ತಂದುಕೊಡಬಲ್ಲ ಪ್ರಮುಖ ಇಲಾಖೆಗಳು ಸ್ಥಗಿತಗೊಂಡ ಕಾರಣ ಆರ್ಥಿಕ ಸಂಕಷ್ಟವನ್ನು ಎದುರಿಸುವಂತಾಗಿದೆ. ಕೋವಿಡ್‌-19ಕ್ಕಾಗಿ ಸರ್ಕಾರವು ಹಣವನ್ನು ವೆಚ್ಚ ಮಾಡಲಾಗುತ್ತಿದೆ. ಕೇಂದ್ರದಿಂದಲೂ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಂದಿಲ್ಲ. ಇದು ಸರ್ಕಾರಕ್ಕೆ ಮತ್ತಷ್ಟುಕಗ್ಗಂಟಾಗಿ ಪರಿಣಿಮಿಸಿದೆ. ಆದಾಯ ಬಾರದಿದ್ದರೆ ಭವಿಷ್ಯದಲ್ಲಿ ರಾಜ್ಯದ ಅಭಿವೃದ್ಧಿಗೆ ಪೆಟ್ಟು ಬೀಳಲಿದೆ. ಇದನ್ನು ಮನಗಂಡ ಸರ್ಕಾರವು ತನ್ನ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಿ ಆದಾಯ ಗಳಿಸುವ ಯೋಚನೆ ಮಾಡಿದೆ ಎಂದು ಹೇಳಲಾಗಿದೆ.

ಕೈಗಾರಿಕೆಗಳು, ಕಾರ್ಖಾನೆಗಳನ್ನು ಆರಂಭಿಸುವುದರಿಂದ ಸಹಜವಾಗಿ ಉತ್ಪನ್ನಗಳ ಉತ್ಪಾದನೆ ಪ್ರಾರಂಭವಾಗಲಿದೆ. ಆರ್ಥಿಕತೆ ನಿಧನವಾಗಿಯಾದರೂ ಸಹಜ ಸ್ಥಿತಿಗೆ ಮರಳಲಿದೆ. ತೆರಿಗೆ, ರಾಜಸ್ವ ಸಂಗ್ರಹವಾಗಲಿದೆ. ಇದರಿಂದ ಮುಂದಿನ ದಿನದಲ್ಲಿ ರೂಪಿಸಬೇಕಾದ ಕಾರ್ಯಕ್ರಮಗಳಿಗೆ ಸಹಕಾರಿಯಾಗಲಿದೆ ಎಂದು ಸರ್ಕಾರದ ಲೆಕ್ಕಚಾರವಾಗಿದೆ ಎನ್ನಲಾಗಿದೆ.

ಬಿಎಸ್‌ವೈ ಸುದ್ದಿಗೋಷ್ಠಿ: ರಾಜ್ಯದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲ...!

ರಾಜ್ಯದಲ್ಲಿ ಕೊರೋನಾ ವೈರಾಣು ಹೆಚ್ಚಾಗುತ್ತಿದ್ದಂತೆ ಲಾಕ್‌ಡೌನ್‌ ಮಾಡಲಾಯಿತು. ಕಳೆದ 28 ದಿನಗಳಿಂದ ಅಗತ್ಯ ವಸ್ತುಗಳ ಮಾರಾಟ ಹೊರತು ಪಡಿಸಿದರೆ ಬೇರಾವುದೇ ವ್ಯವಹಾರ ನಡೆಯುತ್ತಿಲ್ಲ. ತೆರಿಗೆ ಸಂಗ್ರಹವೂ ಸಹ ನಡೆದಿಲ್ಲ. ಆದಾಯ ತಂದುಕೊಡಬಲ್ಲ ಇಲಾಖೆಗಳ ಕಾರ್ಯಾರಂಭಕ್ಕೆ ಸರ್ಕಾರ ಅನುಮತಿ ನೀಡದ ಕಾರಣ ಸರ್ಕಾರದ ಬೊಕ್ಕಸದಲ್ಲಿ ಹಣ ಕೊರತೆ ಉಂಟಾಗಿದೆ. ಆರ್ಥಿಕತೆ ಕೊರತೆಯನ್ನು ನೀಗಿಸಲು ಲಾಕ್‌ಡೌನ್‌ ಸಡಿಲ ಅನಿವಾರ್ಯ ಎಂದು ಹೇಳಲಾಗಿದೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ