
ತುಮಕೂರು (ಜೂ.25) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ ಹಾಕಿಲ್ಲ ಎಂಬ ಕಾರಣಕ್ಕೆ ಪಡಿತರ ನೀಡಲು ನಿರಾಕರಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಶಂಕರ್ ಮಠ ಹತ್ತಿರವಿರುವ ಸರ್ಕಾರಿ ನೌಕರರ ಸಹಕಾರ ಸಂಘದಲ್ಲಿ ನಡೆದಿದೆ.
ಸ್ಥಳೀಯರಾದ ಆರ್ಡಿ ಬಾಬುಗೆ ಪಡಿತರ ನೀಡಲು ನಿರಾಕರಣೆ. ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿದ್ದಾನೆಂಬ ಆರೋಪ. ನೀವು ಕಾಂಗ್ರೆಸ್ನವರು ನಿಮಗೆ ಪಡಿತರ ಇಲ್ಲ ಎನ್ನುತ್ತಿರುವ ಸೊಸೈಟಿ ಸಿಬ್ಬಂದಿ. ಮತ ನಮ್ಮ ಹಕ್ಕು. ಮತಕ್ಕೂ ಪಡಿತರ ವಿತರಣೆಗೆ ಏನು ಸಂಬಂಧ ಎಂದು ಪ್ರಶ್ನಿಸಿರುವ ಬಾಬು. ಆದರೆ ಡೊಂಟ್ ಕೇರ್ ಅಂತಿರೋ ಸೊಸೈಟಿ ಸಿಬ್ಬಂದಿ. ಇದರಿಂದ ಕೆಲಕಾಲ ಸೊಸೈಟಿ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ಹಿಂದಿನಿಂದಲೂ ಸೊಸೈಟಿ ವಿರುದ್ಧ ಹಲವು ದೂರುಗಳು ಕೇಳಿಬರುತ್ತಿವೆ. ಈಗಾಗಲೇ ಹಲವು ದೂರುಗಳಿದ್ದರೂ ಪದೇಪದೆ ಸೊಸೈಟಿ ಹೀಗೆ ಮಾಡುತ್ತಿದೆ. ಬಿಜೆಪಿ ಪಕ್ಷದ ಸೊಸೈಟಿಯಂತೆ ವರ್ತಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tumakuru: ತೋಟದ ಒಂಟಿ ಮನೆ ಮೇಲೆ ಕಳ್ಳರ ದಾಳಿ, ಮನೆ ದರೋಡೆ: ದಂಪತಿ ಮೇಲೆ ಹಲ್ಲೆ
ಸೊಸೈಟಿ ಹಾಗೂ ಸ್ಥಳೀಯರ ನಡುವೆ ವಾಗ್ವಾದ ಹಿನ್ನೆಲೆ ತಿಪಟೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ತಿಪಟೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ