ಜಪಾನ್ ರೀತಿ 14 ನಿಮಿಷದಲ್ಲೇ ವಂದೇ ಭಾರತ್ ರೈಲು ಸ್ವಚ್ಛಗೊಳಿಸಿದ ಸಿಬ್ಬಂದಿ!

Published : Oct 02, 2023, 05:08 AM ISTUpdated : Oct 02, 2023, 05:57 AM IST
ಜಪಾನ್ ರೀತಿ 14 ನಿಮಿಷದಲ್ಲೇ ವಂದೇ ಭಾರತ್ ರೈಲು ಸ್ವಚ್ಛಗೊಳಿಸಿದ ಸಿಬ್ಬಂದಿ!

ಸಾರಾಂಶ

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು 'ಮಿರಾಕಲ್' 14 ನಿಮಿಷಗಳು' ಎಂಬ ಹೆಸರಿನಡಿ ಸ್ವಚ್ಛಗೊಳಿಸುವ ವ್ಯವಸ್ಥೆ ಆರಂಭಿಸಿದೆ.

ಬೆಂಗಳೂರು (ಅ.2): ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು 'ಮಿರಾಕಲ್' 14 ನಿಮಿಷಗಳು' ಎಂಬ ಹೆಸರಿನಡಿ ಸ್ವಚ್ಛಗೊಳಿಸುವ ವ್ಯವಸ್ಥೆ ಆರಂಭಿಸಿದೆ.

ಭಾನುವಾರ ಮಧ್ಯಾಹ್ನ ಯಶವಂತಪುರ ರೈಲು ನಿಲ್ದಾಣ(Yaswantapur railway station)ಕ್ಕೆ ಆಗಮಿಸಿದ ಕಾಚಿಗುಡ ಯಶವಂತಪುರ ವಂದೇ ಭಾರತ್‌ ಎಕ್ಸ್‌ಪ್ರೆಸ್‌(Vande bharat express) ರೈಲನ್ನು ಕೇವಲ 13 ನಿಮಿಷಗಳಲ್ಲಿ ಸ್ವಚ್ಛಗೊ ಳಿಸಿ ಪ್ರಯಾಣಿಕರಿಗೆ ರೈಲು ಹತ್ತಲು ಸಿದ್ಧಗೊಳಿಸಲಾಯಿತು. ಮೊದಲೇ ಸಿದ್ಧಗೊಂಡಿದ್ದ 25ಕ್ಕೂ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿ ರೈಲಿನಿಂದ ಪ್ರಯಾಣಿಕರು ಇಳಿದ ತಕ್ಷಣ ಸ್ವಚ್ಛಗೊಳಿಸಿ ಜನರಿಗೆ ಪ್ರಯಾಣಿಸಲು ಮಾಡಿಕೊಟ್ಟರು.

ರೈಲಲ್ಲಿ 'ನೀನ್​ ಚಂದಾನೆ' ಹಾಡಿಗೆ ಆ್ಯಂಕರ್​ ಅನುಶ್ರೀ ಸಕತ್​ ಎಂಜಾಯ್​: ಇಲ್ಲೂ ಮದ್ವೆ ವಿಷ್ಯ ಕೆದಕಿದ ಫ್ಯಾನ್ಸ್​!

ಈ ವೇಳೆ ಮಾತನಾಡಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್, ವಂದೇ ಭಾರತ್ ರೈಲುಗಳಲ್ಲಿ ಸ್ವಚ್ಛತಾ ಪ್ರಕ್ರಿ ಯೆಗೆ ಸಮಯ ಕಡಿಮೆ ಇರುವುದರಿಂದ ಪ್ರಯಾಣಿಕರು ಹತ್ತಿ ಇಳಿಸುವುದು ತ್ವರಿತವಾಗಿ ನಡೆಯಬೇಕು. ರೈಲ್ವೆ ಸಚಿವರ ಪರಿಕಲ್ಪನೆಯಂತೆ ಜಾರಿಗೆ ಬರುತ್ತಿದೆ. ಇದು ನಿರಂತರವಾಗಿರಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!