
ಕಾರವಾರ (ಸೆ.23): ಕಾರವಾರ ಬಳಿ ಚತುಷ್ಪಥ ಸುರಂಗ ಮಾರ್ಗವನ್ನು ಸೆ. 29ರಂದು ತೆರೆದು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಸವಾಲು ಹಾಕಿರುವುದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸುರಂಗ ಕಲಹ ಮುಂದುವರಿದಂತಾಗಿದೆ.
ಸುರಂಗ ಮಾರ್ಗವನ್ನು ಬಂದ್ ಮಾಡಿರುವುದರಿಂದ ಜನತೆಗೆ ತೊಂದರೆಯಾಗುತ್ತಿದೆ ಎಂದು ಹೇಳಿರುವ ವಿಧಾನ ಪರಿಷತ್ ಸದಸ್ಯ ಸೆ. 29ರಂದು ಸುರಂಗ ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಹೇಳಿದ್ದಾರೆ.
ಈ ಹಿಂದೆ ಒಂದು ಸುರಂಗ ಮಾರ್ಗವನ್ನು ಸಂಸದ ಅನಂತಕುಮಾರ ಹೆಗಡೆ ಲೋಕಾರ್ಪಣೆಗೊಳಿಸಿದರೆ, ಇನ್ನೊಂದು ಸುರಂಗ ಮಾರ್ಗವನ್ನು ಶಾಸಕರಾಗಿ ಆಯ್ಕೆಯಾದ ನಂತರ ಸತೀಶ ಸೈಲ್ ಲೋಕಾರ್ಪಣೆಗೊಳಿಸಿದ್ದರು. ಅದಾದ ತಿಂಗಳಲ್ಲೆ ಸುರಂಗ ಮಾರ್ಗಕ್ಕೆ ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲ ಎಂದು ಸೈಲ್, ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೇರಿ ಸುರಂಗ ಮಾರ್ಗದಲ್ಲಿ ಸಂಚಾರವನ್ನು ತಡೆಹಿಡಿದಿದ್ದರು.
ಉತ್ತರಕನ್ನಡ: ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ, ಓರ್ವನ ಬಂಧನ
ಸುರಂಗ ಮಾರ್ಗ ಬಂದ್ ಮಾಡಿದ್ದರಿಂದ ಈಗ ಜನತೆಗೆ 4 ಕಿಮೀ ಹೆಚ್ಚುವರಿಯಾಗಿ ಸಂಚಾರ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ಕೆರಳಿರುವ ಉಳ್ವೇಕರ್, ಏನೇ ಆಗಲಿ ಸುರಂಗ ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕಲಹಕ್ಕೆ ಕಾರಣವಾಗಿದೆ. ಈ ನಡುವೆ ಸಂಸದ ಅನಂತಕುಮಾರ್ ಹೆಗಡೆ ತಟಸ್ಥವಾಗಿದ್ದಾರೆ. ಮುಂದೇನಾಗಲಿದೆ ಎಂಬ ಕುತೂಹಲ ಜನರಲ್ಲಿ ಉಂಟಾಗಿದೆ.
ಉತ್ತರಕನ್ನಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಮಹಾರುದ್ರ ಯಾಗ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ