ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಈ 3 ಸ್ಥಳಗಳು ಅಂತಿಮ!

Published : Mar 20, 2025, 01:31 PM ISTUpdated : Mar 20, 2025, 01:36 PM IST
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಈ 3 ಸ್ಥಳಗಳು ಅಂತಿಮ!

ಸಾರಾಂಶ

ಬೆಂಗಳೂರು ವಿಮಾನ ನಿಲ್ದಾಣದ ಒತ್ತಡ ಕಡಿಮೆ ಮಾಡಲು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರವು 10 ಸ್ಥಳಗಳ ಪೈಕಿ 3 ಸ್ಥಳಗಳನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಮತ್ತು ಸೋಮನಹಳ್ಳಿ, ಹಾಗೂ ಮಾಗಡಿ ತಾಲೂಕಿನ ನೆಲಮಂಗಲದ ಹತ್ತಿರದ ಸ್ಥಳಗಳನ್ನು ಗುರುತಿಸಲಾಗಿದೆ. ಐಡೆಕ್ ಸಂಸ್ಥೆಯು ತಾಂತ್ರಿಕ ಅಧ್ಯಯನ ನಡೆಸಿ ಈ ಸ್ಥಳಗಳನ್ನು ಶಿಫಾರಸು ಮಾಡಿದೆ.

ಬೆಂಗಳೂರು (ಮಾ.20): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, 10 ಸ್ಥಳಗಳಲ್ಲಿ ಇದೀಗ ಕೇವಲ 3 ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ವರದಿ ಕಳುಹಿಸಿದ್ದು, ಈ ಮೂರು ಸ್ಥಳಗಳಲ್ಲಿ ಕೇಂದ್ರ ನಿಗದಿ ಮಾಡಿದ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ.

ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಲಾಗಿದೆ. ಈಗ ರಾಜ್ಯ ಸರ್ಕಾರದಿಂದ ಅಂತಿಮವಾಗಿ 3 ಸ್ಥಳ ಗುರುತು ಮಾಡಿದೆ. ಈ ಮೂರು ಸ್ಥಳ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಇದು ಅಂತಿಮಗೊಳಿಸಿದ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ. ಹಾಗಾದರೆ, ರಾಜ್ಯ ಸರ್ಕಾರ ಗುರುತು ಮಾಡಿರುವ 3 ಅಂತಿಮ ಸ್ಥಳಗಳು ಯಾವುವು? ಎಂಬ ಮಾಹಿತಿ ಇಲ್ಲಿದೆ ನೋಡಿ..

* ಬೆಂಗಳೂರು ನಗರ ಜಿಲ್ಲೆಯ  ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಹತ್ತಿರ
* ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಹತ್ತಿರ
* ಮಾಗಡಿ ತಾಲೂಕಿನ ನೆಲಮಂಗಲದ ಹತ್ತಿರ

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2033ಕ್ಕೆ ವಿಮಾನ ಸಂಚಾರ ಆರಂಭ: ಸಚಿವ ಎಂ.ಬಿ. ಪಾಟೀಲ್

ಐಡೆಕ್ ಸಂಸ್ಥೆ ಗುರುತಿಸಿರುವ ಸ್ಥಳಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿ ಆಯ್ಕೆ ಮಾಡಿದೆ. ಈ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದ ಐಡೆಕ್ ಸಂಸ್ಥೆ. ತಾಂತ್ರಿಕ ಸಂಭಾವ್ಯತೆ, ರಸ್ತೆ ಸಂಪರ್ಕ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಕೆ ಮಾಡಿತ್ತು. ಈ ವರದಿ ಆಧರಿಸಿ ರಾಜಗ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ಸ್ಥಳಗಳನ್ನು ಅಂತಿಮಗೊಳಿಸಿ ಪ್ರಸ್ತಾವನೆ ಸಲ್ಲಿಕ ಮಾಡಲಾಗಿದೆ.

ಹೆಚ್‌ಎಎಲ್ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಿ: ಹೆಚ್.ಎ.ಎಲ್. ವಿಮಾನ ನಿಲ್ದಾಣವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (Airports Authority of India) ಹಾಗೂ ಹೆಚ್.ಎ.ಎಲ್. ಇವರ ವ್ಯಾಪ್ತಿಯಲ್ಲಿರುತ್ತದೆ. ಹೆಚ್.ಎ.ಎಲ್. ವಿಮಾನ ನಿಲ್ದಾಣವನ್ನು ಡೊಮೆಸ್ಟಿಕ್ ವಿಮಾನ ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ದಿನಾಂಕ: 16.01.2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವನ್ನು (Ministry of Civil Aviation, Government of India) ಕೋರಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ