ಚಿಕ್ಕಬಳ್ಳಾಪುರ: ಬೆಲೆ ಏರಿಕೆ ಬೆನ್ನಲ್ಲೇ ಟೊಮೆಟೊ ಕಳ್ಳರ ಕಾಟ!

Published : Jun 17, 2024, 08:23 PM IST
ಚಿಕ್ಕಬಳ್ಳಾಪುರ: ಬೆಲೆ ಏರಿಕೆ ಬೆನ್ನಲ್ಲೇ ಟೊಮೆಟೊ ಕಳ್ಳರ ಕಾಟ!

ಸಾರಾಂಶ

ಬೆಲೆ ಏರಿಕೆ ಬೆನ್ನಲ್ಲೇ ಮಾರಾಟಕ್ಕೆ ರೈತರು ತಂದಿಟ್ಟಿದ್ದ ಟೊಮ್ಯಾಟೊ ಬಾಕ್ಸ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ (ಜೂ.17): ಬೆಲೆ ಏರಿಕೆ ಬೆನ್ನಲ್ಲೇ ಮಾರಾಟಕ್ಕೆ ರೈತರು ತಂದಿಟ್ಟಿದ್ದ ಟೊಮ್ಯಾಟೊ ಬಾಕ್ಸ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.

ಚಿಂತಾಮಣಿ ಎಪಿಎಂಸಿ ಮಾರುಕಟ್ಟೆಗೆ ರಾಜ್ಯದ ವಿವಿದೆಡೆಯಿಂದ ಸಾಕಷ್ಟು ಟೊಮ್ಯಾಟೋ ಬರುತ್ತದೆ. ಈಗ ಬೆಲೆ ಕೂಡ ಹೆಚ್ಚಳವಾಗಿರುವುದರಿಂದ ಖದೀಮರು ರಾತ್ರೋರಾತ್ರಿ  ಟೊಮ್ಯಾಟೊ ಕದಿಯುವ ಮೂಲಕ ಕೈಚಳಕ ತೋರಿಸಿದ್ದಾರೆ. ಟೊಮ್ಯಾಟೊ ಬಾಕ್ಸ್ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ರೈತರು ಆತಂಕಗೊಂಡಿದ್ದಾರೆ. ಕಷ್ಟಪಟ್ಟು ಬೆಳೆದು ಮಾರಾಟಕ್ಕೆ ತಂದಿದ್ದೇವೆ. ಇದೀಗ ಟೊಮ್ಯಾಟೊ ಬಾಕ್ಸ್‌ಗಳನ್ನು ಕಳ್ಳರು ಕದಿಯುತ್ತಿದ್ದಾರೆ. ಎಪಿಎಂಸಿ ಮಾರುಕಟ್ಟೆಗೆ ಸೂಕ್ತ ಭದ್ರತೆ ಒದಗಿಸಬೇಕು. ಕಳ್ಳತನ ಮಾಡಿರುವ ಖದೀಮರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್