
ಬೆಂಗಳೂರು (ಏ.8): ಬೇಸಿಗೆಯ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿ ಮನೆಯ ಬಾಗಿಲು ತೆರೆದಿಟ್ಟು ನಿದ್ರಿಸಿದ್ದ ಮಹಿಳೆಗೆ ಕಳ್ಳರು ದುಬಾರಿ ಪಾಠ ಕಲಿಸಿದ್ದಾರೆ. ಮನೆಯೊಳಗೆ ನುಗ್ಗಿದ ಅಪರಿಚಿತರು ಬಂಗಾರದ ಸರ ಹಾಗೂ ಮೊಬೈಲ್ಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನೆಪಾಳ್ಯದ 38 ವರ್ಷದ ಮಹಿಳೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮಾ.3ರ ರಾತ್ರಿ 1.30 ರ ಸುಮಾರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಯನ್ನು ನುಂಗಿ ಮಲಗಲು ಮುಂದಾಗಿದೆ. ಈ ವೇಳೆ ನನ್ನ ಕೊರಳಿನಲ್ಲಿದ್ದ ಚಿನ್ನದ ತಾಳಿ, ನನ್ನ ಮೊಬೈಲ್ ಹಾಗೂ ಪತಿಯ ಮೊಬೈಲ್ಗಳನ್ನು ನೆಲದ ಮೇಲೆ ಇಟ್ಟಿದೆ. ಆ ಸಮಯದಲ್ಲಿ ಹೆಚ್ಚಿನ ಸೆಕೆಯಾಗುತ್ತಿದ್ದ ಕಾರಣ ಮನೆಯ ಬಾಗಿಲನ್ನು ತೆರೆದಿಟ್ಟು ಮಲಗಿದೆ. ನಂತರ ಬೆಳಿಗ್ಗೆ 6 ಗಂಟೆಗೆ ಎಚ್ಚರವಾಗಿ ನೋಡಿದ್ದಾಗ ಎರಡು ಮೊಬೈಲ್ ಮತ್ತು 18 ಗ್ರಾಂ ತಾಳಿ ಮತ್ತು 4 ತಾಳಿ ಗುಂಡುಗಳು ಕಂಡುಬರಲಿಲ್ಲ. ಹೀಗಾಗಿ ತಾನು ಮಲಗಿದ್ದ ವೇಳೆ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ