ತಿಂಗಳ ಕೊನೆಗೆ ಮೋಡ ಬಿತ್ತನೆ ಬಗ್ಗೆ ಚಿಂತನೆ: ಸಚಿವ ಕೃಷ್ಣ ಭೈರೇಗೌಡ

Published : Jul 09, 2023, 05:11 AM IST
ತಿಂಗಳ ಕೊನೆಗೆ ಮೋಡ ಬಿತ್ತನೆ ಬಗ್ಗೆ ಚಿಂತನೆ: ಸಚಿವ ಕೃಷ್ಣ ಭೈರೇಗೌಡ

ಸಾರಾಂಶ

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದೆ. ಜುಲೈ ಕೊನೆಯ ವಾರದವರೆಗೆ ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಕಾರವಾರ (ಜು.9) : ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದೆ. ಜುಲೈ ಕೊನೆಯ ವಾರದವರೆಗೆ ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಶನಿವಾರ ಕುಮಟಾ ತಾಲೂಕಿನ ಪೋಸ್ಟ್‌ ಬೆಟ್ಕುಳಿ ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಅಧಿಕಾರಿಗಳ ವರ್ಗಕ್ಕೆ ಚುರುಕು ಮುಟ್ಟಿಸಲು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದೇನೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಉಂಟಾಗಿದೆ. ಮಳೆಯಿಂದಾಗಿ ರಾಜ್ಯದಲ್ಲಿ 21 ಜನರು ಹಾಗೂ 40ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ರು. ಪರಿಹಾರ ನೀಡಲಾಗುತ್ತಿದೆ. ಸಂಪೂರ್ಣ ಮನೆ ಹಾನಿಯಾದವರಿಗೆ ಮನೆ ಕಟ್ಟಿಸಿಕೊಡುವ ಕೆಲಸ ಕೂಡಾ ಸರ್ಕಾರ ಮಾಡಲಿದೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದೆ ಎಂದರು.

ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಇದಕ್ಕಿಂತ ವೈಫಲ್ಯ ಬೇಕಾ?: ಸಚಿವ ಕೃಷ್ಣ ಬೈರೇಗೌಡ

ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಜೈನ ಮುನಿ ಹತ್ಯೆ ಮಾಡಿದವರ ವಿರುದ್ಧ ಕಾನೂನು ಕ್ರಮ:

ನಂದಿ ಪರ್ವತ ಆಶ್ರಮದ ಜೈನ ಮುನಿ ಹತ್ಯೆ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾರ ಮೇಲೂ ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಂದಾಯ ಸಚಿವರು ತಿಳಿಸಿದರು.

ತಲಾ 5 ಲಕ್ಷ ರು. ಪರಿಹಾರ ಘೋಷಣೆ:

ಕುಮಟಾ ತಾಲೂಕಿನ ಬೆಟ್ಕುಳಿಯಲ್ಲಿ ಪ್ರವಾಹಕ್ಕೆ ಬಲಿಯಾದ ಮೃತಪಟ್ಟಸತೀಶ ನಾಯ್ಕ ಹಾಗೂ ಉಲ್ಲಾಸ ಗಾವಡಿ ಮನೆಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಎರಡೂ ಕುಟುಂಬಗಳಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದರು. ಕುಟುಂಬದವರಿಂದ ಮಾಹಿತಿ ಪಡೆದು ಅವರಿಗೆ ಸಾಂತ್ವನ ಹೇಳಿದರು.

ಜು.15 ಬಳಿಕ ಬರಪೀಡಿದ ಗ್ರಾಮಗಳ ಘೋಷಣೆ: ಸಚಿವ ಕೃಷ್ಣ ಬೈರೇಗೌಡ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆಇದ್ದರು.

ಫೋಟೋ-7ಕೆ10- ಮೃತರ ನಿವಾಸಗಳಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್