SSLC ತೃತೀಯ ಭಾಷೆ ಗ್ರೇಡಿಂಗ್ ನೀತಿ ಬಗ್ಗೆ ಮರುಪರಿಶೀಲಿಸಿ: ಸಿಎಸ್‌ ಶಾಲಿನಿಗೆ ಗೌರ್‍ನರ್‌ ಪತ್ರ!

Kannadaprabha News   | Kannada Prabha
Published : Apr 04, 2026, 05:01 AM IST
Third language grading row

ಸಾರಾಂಶ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಪಾಸ್-ಫೇಲ್ ಬದಲು ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಪಾಲರು ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳು ಮತ್ತು ರಾಜ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ 

ಬೆಂಗಳೂರು (ಏ.4): ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿ ಸೇರಿ ತೃತೀಯ ಭಾಷಾ ವಿಷಯಗಳಲ್ಲಿ ಪಾಸ್‌-ಫೇಲ್‌ ಪದ್ಧತಿ ಕೈ ಬಿಟ್ಟು ಗ್ರೇಡಿಂಗ್‌ ನೀತಿ ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪರ-ವಿರೋಧ ಚರ್ಚೆಗೆ ಒಳಗಾಗಿರುವ ನಡುವೆಯೇ ಈ ವಿಚಾರದಲ್ಲಿ ರಾಜ್ಯಪಾಲರೂ ಮಧ್ಯಪ್ರವೇಶಿಸಿದ್ದಾರೆ.

ಈ ವಿಷಯವನ್ನು ಪರಿಶೀಲಿಸಿ ಶಿಕ್ಷಣ ಇಲಾಖೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಸಮಾಲೋಚಿಸಿ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಜ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಈ ಸಂಬಂಧ ರಾಜ್ಯಪಾಲರ ಆದೇಶಾನುಸಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್‌.ಪ್ರಭುಶಂಕರ್‌ ಶುಕ್ರವಾರ ಪತ್ರ ಬರೆದಿದ್ದಾರೆ. ಬೆಂಗಳೂರಿನ ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘಟನೆಯ ಪ್ರತಿನಿಧಿಗಳು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಆಧರಿಸಿ ಈ ಪತ್ರ ಬರೆಯಲಾಗಿದೆ. ಸಂಘಟನೆಯ ಪತ್ರದಲ್ಲಿ ವಿದ್ಯಾರ್ಥಿಗಳಲ್ಲಿ ಭಾಷಾ ವೈವಿಧ್ಯತೆ, ಅರಿವು ಮತ್ತು ಬೌದ್ಧಿಕ ಬೆಳವಣಿಗೆ ಬೆಳೆಸುವಲ್ಲಿ ತೃತೀಯ ಭಾಷೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಲಾಗಿದೆ.

ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲು ಕೇವಲ ಗ್ರೇಡ್‌ ನೀಡುವ ಪ್ರಸ್ತಾವವು ವಿದ್ಯಾರ್ಥಿಗಳಲ್ಲಿ ಅಜಾಗರೂಕತೆ ಉಂಟುಮಾಡಿ ಆ ಭಾಷಾ ವಿಷಯಗಳ ಕಲಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದಂತೆ ಪ್ರೇರೇಪಿಸಬಹುದು. ಇದು ಶೈಕ್ಷಣಿಕ ಮಹತ್ವವನ್ನೂ ಕುಗ್ಗಿಸಬಹುದು. ಇಂತಹ ನೀತಿ ನಿರ್ಧಾರದಿಂದ ರಾಜ್ಯದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟ ಮತ್ತು ಒಳಗೊಳ್ಳುವಿಕೆ ಮೇಲೆ ಆಗುವ ದೀರ್ಘಕಾಲೀನ ಪರಿಣಾಮಗಳ ಕುರಿತು ಶಿಕ್ಷಕರು, ಪೋಷಕರು ಮತ್ತು ಶಿಕ್ಷಣತಜ್ಞರಲ್ಲೂ ಆತಂಕವಿದೆ ಎಂಬ ಅಂಶವನ್ನೂ ಉಲ್ಲೇಖಿಸಲಾಗಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಪಾಲರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತೃತೀಯ ಭಾಷಾ ವಿಷಯದಲ್ಲಿ ಕೈಗೊಂಡಿರುವ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಬೇಕೆಂದು ಬಯಸಿದ್ದಾರೆ. ಹಾಗಾಗಿ ಈ ವಿಷಯವನ್ನು ಪರಿಶೀಲಿಸಿ ಶಾಲಾ ಶಿಕ್ಷಣ ಇಲಾಖೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಸಮಾಲೋಚಿಸಿ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಜ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುವುದಾಗಿ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ವಾಪಸ್ ಮನೆಗೆ ಹೋಗೋಕೂ ಆಗ್ತಿಲ್ಲ..' ಗ್ಯಾಸ್‌ ಸಿಗದೆ ನಿಂತಲ್ಲೇ ನಿಂತ ಆಟೋಗಳು; ಬಂಕ್‌ ಮುಂದೆ 3ನೇ ದಿನವೂ ಕಿ.ಮೀ.ಗಟ್ಟಲೆ ಕ್ಯೂ!
ನ್ಯಾ. ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ 'ಹೆಲ್ತ್ ಬುಲೆಟಿನ್' ಬಿಡುಗಡೆ; ವೈದ್ಯರು ಹೇಳಿದ್ದೇನು?