ನನಸಾಗಲೇ ಇಲ್ಲ ಶ್ರೀಗಳ ಈ ಒಂದು ಕನಸು!

Published : Jan 23, 2019, 07:55 AM IST
ನನಸಾಗಲೇ ಇಲ್ಲ ಶ್ರೀಗಳ ಈ ಒಂದು ಕನಸು!

ಸಾರಾಂಶ

ಸಿದ್ಧಗಂಗಾ ಮಠದ ಪೀಠಾಧಿಪತಿ ಡಾ.ಶಿವಕುಮಾರ ಸ್ವಾಮೀಜಿ ಕನಸೊಂದನ್ನು ಕಂಡಿದ್ದರು. ಆದರೆ ಕೊನೆಗೂ ಅದು ನನಸಾಗಲೇ ಇಲ್ಲ. ಅಷ್ಟಕ್ಕೂ ಆ ಕನಸೇನು? ಇಲ್ಲಿದೆ ವಿವರ

ರಾಮನಗರ[ಜ.23]: ಸಿದ್ಧಗಂಗಾ ಮಠದ ಪೀಠಾಧಿಪತಿ ಡಾ.ಶಿವಕುಮಾರ ಸ್ವಾಮೀಜಿ ಹುಟ್ಟೂರನ್ನು ಅಭಿವೃದ್ಧಿ ಪಡಿಸುವಲ್ಲಿ ರಾಮನಗರ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೀರಾಪುರ ಶಿವಕುಮಾರ ಸ್ವಾಮೀಜಿ ಅವರು ಹುಟ್ಟೂರು ವೀರಾಪುರ ಮತ್ತು ಬಾಲಗಂಗಾಧರನಾಥ ಸ್ವಾಮೀಜಿಗಳ ಹುಟ್ಟೂರು ಬಾನಂದೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ತಲಾ 10 ಕೋಟಿ ರುಪಾಯಿ ಬಿಡುಗಡೆ ಮಾಡಿತ್ತು. ಈ ಹಣವನ್ನು ಸದ್ಬಳಕೆ ಮಾಡುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಆ ಅನುದಾನ ವಾಪಸ್‌ ಸರ್ಕಾರದ ಖಜಾನೆ ಸೇರಿದೆ.

ಸುವರ್ಣ ಗ್ರಾಮೋದಯ ಯೋಜನೆಯಡಿ ಮೂಲ ಸೌಕರ್ಯ ಒದಗಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ 2015-16ನೇ ಸಾಲಿನಲ್ಲಿ ಜಿಪಂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗಕ್ಕೆ .20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆಗಳು ಆಮೆ ವೇಗದಲ್ಲಿ ಸಾಗಿದ ಪರಿಣಾಮ ಅನುದಾನವನ್ನು ಸರ್ಕಾರವೇ ಹಿಂಪಡೆದುಕೊಂಡಿದೆ. ಹೀಗಾಗಿ ಸಿದ್ಧಗಂಗಾ ಶ್ರೀ ಹಾಗೂ ಚುಂಚಶ್ರೀಗಳ ತವರೂರು ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ