
ಬೆಂಗಳೂರು(ಆ.18): ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನು ಮತಿಸಿದ್ದಾರೆ. ಸಿಎಂ ಸ್ಥಾನದಲ್ಲಿರುವಾಗ ಪ್ರಾಸಿ ಕ್ಯೂಷನ್ಗೆ ಅನುಮತಿಸಿದ ರಾಜ್ಯದ 2ನೇ ಪ್ರಕರಣ 13 ವರ್ಷದ ಹಿಂದೆ ರಾಜ್ಯದ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ದ ಅಂದು ರಾಜ್ಯಪಾಲರಾಗಿದ್ದ ಹಂಸ ರಾಜ್ ಭಾರದ್ವಾಜ್ 2011 ಜ.29ರಂದು ಪ್ರಾಸಿ ಕ್ಯೂಷನ್ಗೆ ಅನುಮತಿಸಿದ್ದರು.
ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿತ್ತು . ಯಡಿಯೂರಪ್ಪ, ಅವರ ಮಕ್ಕಳಿಗೆ ಸಂಬಂಧಿಸಿದ ರಾಚೇನಹಳ್ಳಿ ಡಿನೋಟಿಫಿ ಕೇಷನ್ ಪ್ರಕರಣ ಸಂಬಂಧ ವಕೀಲರಾದ ಸಿರಾಜಿನ್ ಬಾಷಾ ಮತ್ತಿತರ ನಿಯೋಗ ಸಲ್ಲಿಸಿದ್ದ ದೂರನ್ನು ಆಧರಿಸಿ ಪ್ರಾಸಿಕ್ಯೂಷನ್ ಗೆ ನೀಡಲಾಗಿತ್ತು.
ರಾಜ್ಯಪಾಲರು ಅನುಮತಿ ನಂತರ ಬಿಎಸ್ ವೈ ರಾಜೀನಾಮೆ ನೀಡಿರಲಿಲ್ಲ. ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಲೋಕಾಯುಕ್ತ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದು 2011ರ ಅ.14ರಂದು, ಅಂದರೆ 10 ತಿಂಗಳ ನಂತರ. ಆಗ ಅವರು ಸಿಎಂ ಸ್ಥಾನದಲ್ಲಿರಲಿಲ್ಲ. ಅಷ್ಟರಲ್ಲಾಗಲೇ ಅಂದಿನ ಲೋಕಾಯುಕ್ತ ನ್ಯಾಯಮುರ್ತಿ ಎನ್.ಸಂತೋಷ್ ಹೆಗ್ಡೆ ಅಕ್ರಮ ಗಣಿಗಾರಿಕೆ ಸಂಬಂಧ ನೀಡಿದ್ದ ವರದಿಯಿಂದಾಗಿ ಬಿಎಸ್ವೈ ರಾಜೀನಾಮೆ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ