
ವಿಜಯಪುರ: ನೀರಿನಲ್ಲಿ ಬಿದ್ದ ತಮ್ಮನನ್ನು ಕಾಪಾಡಲು ಹೋದ ಮೂವರು ಅಕ್ಕಂದಿರು ತಮ್ಮನ ಸಮೇತ ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಾಲ್ಕೂ ಮಕ್ಕಳು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿತಾಂಡದಲ್ಲಿ ಈ ದುರ್ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ವಾಸಿಸುತ್ತಿದ್ದ ಮಕ್ಕಳು. ಮುಳುಗುತ್ತಿರುವ ತಮ್ಮನ್ನನ್ನ ರಕ್ಷಿಸಲು ಹೋದ ಮೂರು ಜನ ಅಕ್ಕಂದಿರು ನೀರು ಪಾಲಾಗಿದ್ದಾರೆ. ಅಭಿ ವೀರ್ಯಾ ನಾಯ್ಕ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) ಸಾವನ್ನಪ್ಪಿ ಒಂದೇ ಕುಟುಂಬದ ಸದಸ್ಯರು.
ಮೊದಲು ಅಭಿನೀರಿನಲ್ಲಿಮುಳುಗುತ್ತಿದ್ದ. ಈತನ ರಕ್ಷಣೆ ಒಬ್ಬರಾದಂತೆ ಒಬ್ಬರು ಹೋಗಿ ನೀರು ಪಾಲಾಗಿದ್ದಾರೆ. ಮೂರು ಶವ ಪತ್ತೆಯಾಗಿದ್ದು ಅಪೂರ್ವಾ ಶವಕ್ಕಾಗಿ ಹುಡುಕಾಟ ಮಾಡಲಾಗುತ್ತಿದೆ. ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಕೆರೆ, ಹಳ್ಳ ಹಾಗೂ ಹೊಂಡಗಳು ತುಂಬಿವೆ. ಹೊಂಡದಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇನ್ನಷ್ಟು ಮಾಹಿತಿ ಶೀಘ್ರದಲ್ಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ