
ಬೆಂಗಳೂರು, (ಮೇ.12): ಕೊರೋನಾ 2 ಅಲೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೊರೋನಾವನ್ನು ನಿಯಂತ್ರಿಸಲು ಇನ್ನಿಲ್ಲದ ಕಸತ್ತು ನಡೆಸಿದೆ.
ಆರೋಗ್ಯ ಇಲಾಖೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬೆರಳಚ್ಚು (ತಂಬ್) ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಇಂದು (ಬುಧವಾರ) ಆದೇಶ ಹೊರಡಿಸಿದೆ.
ಸರ ಸರ ಪಡಿತರ.. 'ಒನ್ ನೇಷನ್, ಒನ್ ರೇಷನ್ '..ಯಾರಿಗೆಲ್ಲ ಲಾಭ?
ರಾಜ್ಯದಲ್ಲ ಕೊರೋನಾ ಎರಡನೇ ಅಲೆ ವ್ಯಾಪಿಸುತ್ತಿರುವುದರಿಂದ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ 2021 ಮೇ ತಿಂಗಳ ಪಡಿತರವನ್ನು ಚೀಟಿದಾರರ ಬೆರಳು ಮುದ್ರೆ (ಬಯೋಮೆಟ್ರಿಕ್) ಪಡೆಯದೇ ವಿತರಿಸಲು ಸರ್ಕಾರ ತಿಳಿಸಿದೆ.
ಈಗಾಗಲೇ ನೌಕರರ ಬಯೋಮೆಟ್ರಿಕ್ ಹಾಜರಾತಿಯನ್ನೂ ಸಹ ರಾಜ್ಯ ಸರ್ಕಾರ ಕ್ಯಾನ್ಸಲ್ ಮಾಡಿದೆ. ಇದೀಗ ಪಡಿತರ ಅಂಗಡಿಯಲ್ಲೂ ಬಯೋಮೆಟ್ರಿಕ್ ಉಪಯೋಗಿಸದಂತೆ ಮಾಲೀಕರಿಗೆ ಸರ್ಕಾರ ಹೇಳಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ