
ಬೆಂಗಳೂರು (ಅ.27): ಹುಲಿ ಉಗುರಿನ ಆಭರಣ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ನೋಟಿಸ್ ನೀಡಿದರೂ ಚಲನಚಿತ್ರ ನಟರು ಉತ್ತರಿಸುವ ಗೋಜಿಗೆ ಹೋಗಿಲ್ಲ.
ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ವಿರುದ್ಧವಾಗಿ ಅಕ್ರಮವಾಗಿ ಹುಲಿ ಉಗುರಿನ ಆಭರಣ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಬುಧವಾರ ಚಲನಚಿತ್ರ ನಟರಾದ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್ ಮತ್ತು ರಾಕ್ಲೈನ್ ವೆಂಕಟೇಶ್ ಮನೆಗಳಿಗೆ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಅವರ ಬಳಿಯಿದ್ದ ಹುಲಿ ಉಗುರಿನ ಮಾದರಿಯನ್ನು ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಿದ್ದಾರೆ.
ಅದರ ಜತೆಗೆ ಹುಲಿ ಉಗುರಿನ ಮಾದರಿಯನ್ನು ಇಟ್ಟುಕೊಂಡಿದ್ದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿ, ಉತ್ತರಿಸುವಂತೆಯೂ ತಿಳಿಸಿದ್ದರು. ಉತ್ತರವನ್ನು ಖುದ್ದು ಹಾಜರಾಗಿ ನೀಡಲು ಸಾಧ್ಯವಾಗದಿದ್ದರೆ ಲಿಖಿತ ರೂಪದಲ್ಲಿ ನೀಡುವಂತೆ ನೋಟಿಸ್ ಜಾರಿ ಮಾಡಿದ್ದ ಅಧಿಕಾರಿಗಳು ನಟರಿಗೆ ತಿಳಿಸಿದ್ದರು. ಆದರೆ, ಆ ನೋಟಿಸ್ಗೆ ತಲೆಕೆಡಿಸಿಕೊಳ್ಳದ ಚಲನಚಿತ್ರ ನಟರು ಅರಣ್ಯ ಇಲಾಖೆಗೆ ಉತ್ತರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗಿದೆ.
ಚಿತ್ರ ನಟರು ಹುಲಿ ಉಗುರು ಯಾಕೆ ಧರಿಸ್ಬಾರ್ದು? ಇವ್ರು ಕೊಟ್ಟಿದ್ದಾರೆ ಕಾರಣ ನೋಡಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ