ಹುಲಿ ಉಗುರು ಪ್ರಕರಣ; ತುಮಕೂರಿನ ಮತ್ತೊಬ್ಬ ಸ್ವಯಂಘೋಷಿತ ಗುರೂಜಿಗೆ ಸಂಕಷ್ಟ!

Published : Oct 24, 2023, 11:14 PM ISTUpdated : Oct 24, 2023, 11:25 PM IST
ಹುಲಿ ಉಗುರು ಪ್ರಕರಣ; ತುಮಕೂರಿನ ಮತ್ತೊಬ್ಬ ಸ್ವಯಂಘೋಷಿತ ಗುರೂಜಿಗೆ ಸಂಕಷ್ಟ!

ಸಾರಾಂಶ

ಕನ್ನಡ ಕಿರುತೆರೆಯ  ರಿಯಾಲಿಟಿ  ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬನನ್ನು ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗಬಂಧನಕ್ಕೆ ಒಪ್ಪಿಸಿದೆ. 

ತುಮಕೂರು (ಅ.24): ಕನ್ನಡ ಕಿರುತೆರೆಯ  ರಿಯಾಲಿಟಿ  ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬನನ್ನು ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗಬಂಧನಕ್ಕೆ ಒಪ್ಪಿಸಿದೆ. 

ಈ ಪ್ರಕರಣದ ಬಳಿಕ ಹಲವು ಸೆಲೆಬ್ರಿಟಿಗಳು, ಸ್ವಾಮೀಗಳು ಹುಲಿ ಉಗುರು, ಹುಲಿ ಚರ್ಮ ಉಪಯೋಗಿಸುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ವಿಡಿಯೋಗಳು ವೈರಲ್‌ ಆಗಿವೆ. ವರ್ತೂರು ಸಂತೋಷ್ ಬಂಧನ ಆಯ್ತು, ಇವರ ಬಂಧನ ಯಾವಾಗ ಎಂದು ನೆಟ್ಟಿಗರು ಕೇಳುತ್ತಿದ್ದಾರೆ. ಇದೀಗ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ.

ಸ್ವಯಂಘೋಷಿತ ಗುರೂಜಿ ಒಬ್ಬ ಹುಲಿ ಉಗುರಿನ ಪೆಂಡೆಟ್ ಧರಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕನಾಗಿರುವ ಧನಂಜಯ ಗುರೂಜಿ.

ಚಿಕ್ಕಮಗಳೂರು: ಬಿಗ್‌ಬಾಸ್ ಸ್ಪರ್ಧಿ ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ

ದೇವಾಲಯದ ಬಳಿ ಬಸವೇಶ್ವರ ಮಠ ಸ್ಥಾಪಿಸಿ ಗುರೂಜಿಯಾಗಿರುವ ಅರ್ಚಕ. ಮಠದ ಸ್ವಾಮೀಜಿಯಾದ ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸುತ್ತಿರುವ ಸ್ವಾಮೀಜಿ. ಒಡವೆಗಳ ಜೊತೆಗೆ ಕೊರಳಿಗೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಧನಂಜಯ ಗುರೂಜಿಯ ಫೋಟೊ ವೈರಲ್ ಆಗಿದ್ದು, ಸಾಮಾಜಿಕ ಕಾರ್ಯಕರ್ತ ನಾಗರಾಜ್ ಎಂಬುವವರು ಧನಂಜಯ ಗುರೂಜಿ ವಿರುದ್ಧ  ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್