
ಪುತ್ತೂರು (ಸೆ.29) ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ಎಂಬವರು ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.
ಅವರು ಶನಿವಾರ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ತಿರುಪತಿ ಲಡ್ಡು ತಿರುಪತಿ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಕೊಡುವ ಪವಿತ್ರ ಪ್ರಸಾದವಾಗಿದ್ದು, ಅದನ್ನು ರಾಜಕೀಯ ಕಾರಣಗಳಿಗಾಗಿ ಅಪವಿತ್ರಗೊಳಿಸಲಾಗಿದೆ. ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಪ್ರಾಣಿಗಳ ಕೊಬ್ಬನ್ನು ಲಡ್ಡು ಪ್ರಸಾದದಲ್ಲಿ ಬೆರಕೆ ಮಾಡಿರುವುದು ಆಘಾತಕಾರಿ. ಇದೊಂದು ಉದ್ದೇಶಪೂರ್ವಕ ದುಷ್ಕೃತ್ಯವಾಗಿದ್ದು ಆಸ್ತಿಕರ ಭಾವನೆಗಳನ್ನು, ನಂಬಿಕೆಗಳನ್ನು ಹಾಗೂ ಹಿಂದೂ ಧರ್ಮವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ೨೭೨ ಹಾಗೂ ೨೭೩ನೇ ವಿಭಾಗದಲ್ಲಿ ಉಲ್ಲೇಖಿತವಾಗಿರುವ ಆಹಾರ ಕಲಬೆರಕೆ, ೨೯೧ರಲ್ಲಿ ಉಲ್ಲೇಖಿತವಾಗಿರುವ ಅಧಿಕಾರ ದುರ್ಬಳಕೆ ವಿಷಯದ ನೆಲೆಯಲ್ಲಿ ದೂರು ದಾಖಲಿಸುವಂತೆ ದೂರಿನಲ್ಲಿ ಅವರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರಾದ ಗಣೇಶ್ ಪ್ರಸಾದ್ ಎ. ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ