ನಾಡಗೀತೆಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಅಧಿಕೃತಗೊಳಿಸಿ; ಹಕ್ಕೊತ್ತಾಯ

Published : Jan 29, 2020, 10:08 PM ISTUpdated : Jan 29, 2020, 10:17 PM IST
ನಾಡಗೀತೆಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಅಧಿಕೃತಗೊಳಿಸಿ; ಹಕ್ಕೊತ್ತಾಯ

ಸಾರಾಂಶ

ಮೈಸೂರು ಅನಂತಸ್ವಾಮಿ ಕುಟುಂಬದ ಬೇಸರ/ ಅನಂತಸ್ವಾಮಿಯವರ ಮಗಳಾದ ಸುನೀತಾ ಅನಂತಸ್ವಾಮಿ ಹಾಗೂ ಪತ್ನಿ ಶಾಂತ ಅನಂತಸ್ವಾಮಿ ಬೇಸರ/ ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿ 

ಬೆಂಗಳೂರು(ಜ. 29)  ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯನ್ನು ಅಧಿಕೃತ ಎಂದು ಇನ್ನೂ ಘೋಷಿಸದಿರುವ ಬಗ್ಗೆ  ಮೈಸೂರು ಅನಂತಸ್ವಾಮಿ ಕುಟುಂಬ ತೀವ್ರ ಬೇಸರ ವ್ಯಕ್ತಪಡಿಸಿದೆ.

'ಅವಧಿ' ಅಂತರ್ಜಾಲ ತಾಣ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಬಹುರೂಪಿ' ಪ್ರಕಾಶನ ಪ್ರಕಟಿಸಿರುವ 'ನನ್ನ ಅಣ ಮೈಸೂರು ಅನಂತಸ್ವಾಮಿ' ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಬೇಸರ ವ್ಯಕ್ತವಾಯಿತು.

ಕೃತಿಯ ಲೇಖಕಿ, ಅನಂತಸ್ವಾಮಿಯವರ ಮಗಳಾದ ಸುನೀತಾ ಅನಂತಸ್ವಾಮಿ ಹಾಗೂ ಪತ್ನಿ ಶಾಂತ ಅನಂತಸ್ವಾಮಿ ಬೇಸರ ವ್ಯಕ್ತಪಡಿಸಿದರು. 2006ರಲ್ಲಿಯೇ ನಾಡಗೀತೆಗೆ ಯಾವ ರಾಗ ಸಂಯೋಜನೆಯನ್ನು ಉಳಿಸಿಕೊಳ್ಳಬೇಕು ಎಂದು ನಿರ್ಧರಿಸಲು ಸರ್ಕಾರ ರಚಿಸಿದ್ದ ಸಮಿತಿಯು ಮೈಸೂರು ಅನಂತಸ್ವಾಮಿಯವರ ರಾಗವನ್ನು ಶಿಫಾರಸು ಮಾಡಿತ್ತು. ಆದರೂ ಸಹಾ ಅದನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿಲ್ಲ. ಇದರಿಂದ ನಾಡಗೀತೆಯ ರಾಗ ವಿವಾದಕ್ಕೆ ತುತ್ತಾಗಿದೆ ಎಂದರು.

ನಾಡಗೀತೆ 2.5 ನಿಮಿಷಕ್ಕೆ ಇಳಿಸಲು ಸರ್ಕಾರದ ನಿರ್ಧಾರ

ಮೈಸೂರು ಅನಂತಸ್ವಾಮಿಯವರು 'ಜಯ ಭಾರತ ಜನನಿಯ ತನುಜಾತೆ' ಹಾಡಿಗೆ ಸಂಯೋಜಿಸಿದ ರಾಗವನ್ನು ಸ್ವತಃ ಕುವೆಂಪುರವರೇ ಮೆಚ್ಚಿದ್ದರು. ಸರ್ಕಾರ ಈ ಗೀತೆಯನ್ನು ನಾಡಗೀತೆ ಎಂದು ಪರಿಗಣಿಸುವ ಸಾಕಷ್ಟು ಮುಂಚೆಯೇ ಅನಂತಸ್ವಾಮಿಯವರು ಇದನ್ನು ನಾಡಿನ ಎಲ್ಲೆಡೆ ಹಾಡಿ ಜನಪ್ರಿಯಗೊಳಿಸಿದ್ದರು. ಖ್ಯಾತ ಹಾಡುಗಾರರಾದ ಪಿ.ಕಾಳಿಂಗರಾಯರೂ ಸಹಾ ತಮ್ಮ ದಾಟಿಯನ್ನು ಬಿಟ್ಟು ಮೈಸೂರು ಅನಂತಸ್ವಾಮಿಯವರ ಸಂಯೋಜನೆಯನ್ನು ಮೆಚ್ಚಿ ಅದನ್ನು ಅಳವಡಿಸಿಕೊಂಡಿದ್ದರು. 

ಅನಂತಸ್ವಾಮಿ ಅವರು ಭಾವಗೀತೆಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ನಾಡಗೀತೆಯ ರಾಗವನ್ನು ವಿವಾದಗೊಳಿಸುವ ಮೂಲಕ ಅವರಿಗೆ ಅವಮಾನ ಮಾಡಬೇಡಿ ಎಂದು ಅವರ ಕುಟುಂಬದವರು ಮನವಿ ಮಾಡಿದರು.   ಮೈಸೂರು ಅನಂತಸ್ವಾಮಿಯವರನ್ನು ಆಪ್ತವಾಗಿ ಚಿತ್ರಿಸುವ ಈ ಕೃತಿಯನ್ನು ಪ್ರಸ್ತುತ ಅಮೆರಿಕಾದಲ್ಲಿರುವ ಸುನೀತಾ ಅನಂತಸ್ವಾಮಿ ರಚಿಸಿದ್ದು ಅಪರೂಪದ ಛಾಯಾಚಿತ್ರಗಳನ್ನು ಹೊಂದಿದೆ.  ಕೃತಿಯನ್ನು bahuroopi.in ನಲ್ಲಿ ಕೊಳ್ಳಲು ಅವಕಾಶ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!