ಅಕ್ರಮ ತಡೆಗೆ ರೆವಿನ್ಯೂ ಸೈಟ್‌ ನೋಂದಣಿ ಸ್ಥಗಿತ: ಅಶೋಕ್

Published : Jan 25, 2020, 09:58 AM ISTUpdated : Jan 25, 2020, 11:43 AM IST
ಅಕ್ರಮ ತಡೆಗೆ ರೆವಿನ್ಯೂ ಸೈಟ್‌ ನೋಂದಣಿ ಸ್ಥಗಿತ: ಅಶೋಕ್

ಸಾರಾಂಶ

ಅಕ್ರಮ ತಡೆಗೆ ರೆವಿನ್ಯೂ ಸೈಟ್‌ ನೋಂದಣಿ ಸ್ಥಗಿತ| ಯಾರದ್ದೋ ನಿವೇಶನವನ್ನು ಮತ್ಯಾರೋ ಮಾರಾಟ ಮಾಡುತ್ತಿದ್ದರು: ಅಶೋಕ್‌| ರೆವಿನ್ಯೂ ಸೈಟ್‌ ಮಾಲೀಕರ ಭವಿಷ್ಯ ಕುರಿತು ಸಿಎಂ ಜತೆ ಚರ್ಚಿಸಿ ತೀರ್ಮಾನ

ಬೆಂಗಳೂರು[ಜ.25]: ಭೂ ಪರಿವರ್ತನೆಯಾಗದ ಹಾಗೂ ಸಕ್ಷಮ ಯೋಜನಾ ಪ್ರಾಧಿಕಾರದಿಂದ ಮಂಜೂರಾತಿಯಾಗದ ನಿವೇಶನಗಳ ಅಕ್ರಮ ನೋಂದಣಿ ತಡೆಯುವ ದೃಷ್ಟಿಯಿಂದ ಕಂದಾಯ ನಿವೇಶನಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ರಾಜ್ಯಾದ್ಯಂತ ಸೈಟ್‌ ನೋಂದಣಿ ಏಕಾ ಏಕಿ ಸ್ಥಗಿತ!

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆಯ ಕಾವೇರಿ ತಂತ್ರಾಂಶದಲ್ಲಿ ಭೂ ಪರಿವರ್ತನೆಯಾಗದ, ಯೋಜನಾ ಮಂಜೂರಾತಿ ಇಲ್ಲದ ಕಂದಾಯ ನಿವೇಶನಗಳ ನೋಂದಣಿಗೆ ಅವಕಾಶವಿಲ್ಲ. ಆದರೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭೂ ಪರಿವರ್ತನೆ ಮಾಡದೆ, ಸಕ್ಷಮ ಯೋಜನಾ ಪ್ರಾಧಿಕಾರಗಳಿಂದ ಮಂಜೂರಾತಿ ಪಡೆಯದೆ ಅಕ್ರಮವಾಗಿ ಲೇಔಟ್‌ಗಳನ್ನು ನಿರ್ಮಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮ ಬಾಹಿರವಾಗಿ ನಿವೇಶನಗಳ ನೋಂದಣಿ ಮಾಡಿರುವ ಬಗ್ಗೆ ಸಾಕಷ್ಟುದೂರುಗಳು ಬಂದಿವೆ. ಕೆಲವೆಡೆ 10 ನಿವೇಶನಗಳನ್ನು 20 ನಿವೇಶಗಳನ್ನಾಗಿ ಮಾರಾಟ ಮಾಡುವ, ಯಾರದ್ದೋ ನಿವೇಶನವನ್ನು ಮತ್ಯಾರೋ ಮಾರಾಟ ಮಾಡುವಂತಹ ಪ್ರಯತ್ನಗಳು ನಡೆದಿವೆ. ಇಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕಂದಾಯ ನಿವೇಶನಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

ಈಗಾಗಲೇ ಸಾಕಷ್ಟುಜನರು ಇಂತಹ ಬಡಾವಣೆಗಳಲ್ಲಿ ಕಂದಾಯ ನಿವೇಶನಗಳನ್ನು ಖರೀದಿಸಿದ್ದಾರೆ. ಅಂತಹವರ ಗತಿ ಏನು ಎಂಬ ಪ್ರಶ್ನೆಗೆ, ಇಂತಹ ಅಕ್ರಮ ಲೇಔಟ್‌ ಹಾಗೂ ನಿವೇಶನಗಳನ್ನು ಖರೀದಿಸಿರುವುದರ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

500 ರು. ಲಂಚ ಕೊಡದ್ದಕ್ಕೆ ಮಕ್ಕಳ ವಯಸ್ಸು 100 ವರ್ಷ ಹೆಚ್ಚಿಸಿದ ಅಧಿಕಾರಿ!

ರಾಜ್ಯಾದ್ಯಂತ ಕಂದಾಯ ನಿವೇಶನಗಳ ನೋಂದಣಿಯನ್ನು ಸರ್ಕಾರ ಹಠಾತ್‌ ಸ್ಥಗಿತಗೊಳಿಸಿರುವ ಬಗ್ಗೆ ‘ಕನ್ನಡಪ್ರಭ’ ಶುಕ್ರವಾರ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ