
ಬೆಂಗಳೂರು (ಡಿ.21): ದೇಶದಲ್ಲಿ ಕೋವಿಡ್ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 24 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,174 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 23 ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 93 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ.
ಕಾಫಿನಾಡಲ್ಲಿ ಪಾಸಿಟಿವ್ ಖಾತೆ ತೆಗೆದ ಕೊವಿಡ್, ನಾಲ್ವರಿಗೆ ಸೋಂಕು ದೃಢ!
ಇಂದು ಆಸ್ಪತ್ರೆಯಿಂದ 11 ಮಂದಿ ಡಿಸ್ಜಾರ್ಜ್ ಆಗಿದ್ದು, ರಾಜ್ಯದಲ್ಲಿ ಒಟ್ಟು 105 ಸಕ್ರಿಯ ಕೊರೋನಾ ಕೇಸ್ಗಳಿನೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
105 ಪ್ರಕರಣಗಳಲ್ಲಿ, 85 ಜನರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಮತ್ತು 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 20 ಮಂದಿಯಲ್ಲಿ ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ.
ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಮಹಾಮಾರಿ; ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ