
ತಾಸು ಬಿಟ್ಟುಬಿಡದೆ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಮೇಲೆಯೇ ನೀರು ತುಂಬಿ ಹರಿದಿದ್ದು, ವಾಹನ ಸವಾರರು ಪರದಾಡುವಂತಾಯಿತು. ಹಳಿಯಾಳದಲ್ಲಿ ಮಳೆಯ ಸಿಂಚನವಾಗಿದ್ದರೆ, ದಾಂಡೇಲಿ ಮತ್ತು ಭಟ್ಕಳದಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲು ಮತ್ತು ಏರಿದ ತಾಪಮಾನದಿಂದ ಬಳಲುತ್ತಿದ್ದ ಕಾಫಿನಾಡಿನ ಜನತೆಗೆ ವರುಣದೇವ ತಂಪೆರೆದಿದ್ದಾನೆ. ಜಿಲ್ಲೆಯ ಆಲ್ದೂರು ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗದಲ್ಲಿ ಇಂದು ಮಧ್ಯಾಹ್ನ ದಿಢೀರ್ ವಾತಾವರಣ ಬದಲಾಯ್ತು. ಬಿಸಿಲು ಮಾಯವಾಗಿ ಮೋಡ ಕವಿದು, ಹೊಸ ಮಳೆಯ ಮಣ್ಣಿನ ಸುವಾಸನೆಯೊಂದಿಗೆ ಧಾರಾಕಾರ ಮಳೆ ಸುರಿಯಿತು. ಈ ಅಕಾಲಿಕ ಮಳೆಯು ಜಿಲ್ಲೆಯ ಜನರಲ್ಲಿ ಹರ್ಷ ತಂದಿದ್ದು, ಸುಡು ಬಿಸಿಲಿನ ಬೇಗೆಗೆ ತಾತ್ಕಾಲಿಕ ವಿರಾಮ ನೀಡಿದೆ.
ಈ ಮಳೆಯು ಮಲೆನಾಡಿನ ಕಾಫಿ ಮತ್ತು ಅಡಿಕೆ ಬೆಳೆಗಾರರಿಗೆ ವರದಾನವಾಗಿ ಪರಿಣಮಿಸಿದೆ. ಹೂ ಬಿಡುವ ಹಂತದಲ್ಲಿರುವ ಕಾಫಿ ಗಿಡಗಳಿಗೆ ಮಳೆರಾಯ ನೀರುಣಿಸಿದ್ದಾನೆ. ಇದರಿಂದಾಗಿ ಉತ್ತಮ ಇಳುವರಿಯ ನಿರೀಕ್ಷೆ ಮೂಡಿಸಿದೆ. ಕಾಫಿ ತೋಟಗಳಿಗೆ ನೀರು ಹರಿಸಲು ಹರಸಾಹಸ ಪಡುತ್ತಿದ್ದ ಬೆಳೆಗಾರರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಆಲ್ದೂರು ಭಾಗದ ಕಾಫಿ ತೋಟಗಳು ಮತ್ತೆ ಹಸಿರಿನಿಂದ ಕಂಗೊಳಿಸಲಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ಮೋಡ ಕವಿದ ವಾತಾವರಣ ದಟ್ಟವಾಗಿದ್ದು, ಯಾವುದೇ ಕ್ಷಣದಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆಯಿದೆ. ಅಕಾಲಿಕ ಮಳೆಯಿಂದಾಗಿ ಒಂದೆಡೆ ರೈತರಿಗೆ ಖುಷಿಯಾಗಿದ್ದರೆ, ಇನ್ನೊಂದೆಡೆ ಸಾರ್ವಜನಿಕರ ದೈನಂದಿನ ಜನಜೀವನದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ